<p><strong>ಕಡಬ</strong> (ಉಪ್ಪಿನಂಗಡಿ): ಕಡಬ ತಾಲ್ಲೂಕು ಪಂಚಾಯಿತಿ ತ್ರೈಮಾಸಿಕ ಕೆಡಿಪಿ ಸಭೆ 4 ತಿಂಗಳಾದರೂ ನಡೆಯುತ್ತಿಲ್ಲ, ಈ ಬಗ್ಗೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹಾಗೂ ಶಾಸಕರು ಗಮನ ಹರಿಸುತ್ತಿಲ್ಲ ಎಂದು ಆರೋಪಿಸಿ ಕೆಡಿಪಿ ನಾಮನಿರ್ದೇಶಿತ ಸದಸ್ಯರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.</p>.<p>ನಾಮ ನಿರ್ದೇಶಿತ ಸದಸ್ಯರಾದ ಶಿವರಾಮ ರೈ, ಅಶ್ರಫ್ ಶೇಡಿಗುಂಡಿ, ಮೋನಪ್ಪ, ಪದ್ಮನಾಭ ಗೌಡ, ಗಿರೀಶ್ ಬದನೆ, ಉಷಾ ಜೋಯಿ ತಾ.ಪಂ ಕಚೇರಿಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥಾಪಕಿ ಭವ್ಯ ಎಂ.ಅವರೊಂದಿಗೆ ಚರ್ಚೆ ನಡೆಸಿದರು.</p>.<p>ಶಿವರಾಮ ರೈ ಮಾತನಾಡಿ, ಜಿಲ್ಲಾ ಮಟ್ಟದ ಕೆಡಿಪಿ ಸಭೆ ಸರಿಯಾದ ಸಮಯದಲ್ಲಿ ನಡೆಯುತ್ತದೆ. ಕಡಬ ತಾಲ್ಲೂಕು ಕೆಡಿಪಿ ಸಭೆಯನ್ನು ನಡೆಸಲು ನಿರ್ಲಕ್ಷ್ಯ ವಹಿಸಿರುವುದು ಖಂಡನೀಯ ಎಂದರು.</p>.<p>ಅಶ್ರಫ್ ಶೇಡಿಗುಂಡಿ ಮಾತನಾಡಿ, ಸಭೆ ನಡೆಸುವಂತೆ ಒತ್ತಡ ಹಾಕಿದ ಬಳಿಕ ಕಳೆದ ಬಾರಿ ಸಭೆ ನಡೆಸಲಾಗಿದೆ. ಈ ರೀತಿಯಾದರೆ ಜನರ ಸಮಸ್ಯೆಯನ್ನು ಅಧಿಕಾರಿಗಳಿಗೆ ತಿಳಿಯಪಡಿಸುವುದು ಹೇಗೆ ಎಂದು ತಾಲ್ಲೂಕು ಪಂಚಾಯಿತಿ ವ್ಯವಸ್ಥಾಪಕರಲ್ಲಿ ಕೇಳಿದರು. ಶಾಸಕಿ ಸುಳ್ಯದಲ್ಲಿ ಸಭೆ ಮಾಡುತ್ತಾರೆ, ಕಡಬದಲ್ಲಿ ಯಾಕೆ ಮಾಡುತ್ತಿಲ್ಲ ಎಂದರು.</p>.<p>ಕಂದಾಯ ಇಲಾಖೆಯಲ್ಲಿ ಸಮಸ್ಯೆಗಳಿರುವುದರಿಂದ ಕಂದಾಯ ಇಲಾಖೆಯ ಸಭೆಯನ್ನು ಪ್ರತ್ಯೇಕವಾಗಿ ನಡೆಸುತ್ತೇವೆ ಎಂದು ಶಾಸಕಿ ಈ ಹಿಂದಿನ ಸಭೆಯಲ್ಲಿ ಹೇಳಿದ್ದರು. ಇದೀಗ ಆ ಸಭೆಯೂ ನಡೆಯುತ್ತಿಲ್ಲ. ಪಾಲನಾ ವರದಿ ನೀಡುವಂತೆ ತಾಲ್ಲೂಕು ಪಂಚಾಯಿತಿ ವ್ಯವಸ್ಥಾಪಕರಲ್ಲಿ ಕೇಳಿದರು.</p>.<p>ಈ ಬಗ್ಗೆ ಉತ್ತರಿಸಿದ ವ್ಯವಸ್ಥಾಪಕರು, ಸಿಬ್ಬಂದಿ ಕೊರತೆ ಹಾಗೂ ಸಮಯದ ಅಭಾವದಿಂದ ಸಭೆ ನಡೆಸಲು ವಿಳಂಬವಾಗಿದೆ. ಕೂಡಲೇ ಸಭೆ ನಡೆಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿ, ಪಾಲನಾ ವರದಿಯನ್ನು ನೀಡಿದರು.</p>.<p>ಇದೇ ರೀತಿ ಮುಂದುವರಿದರೆ ಅಧಿಕಾರಿಗಳ ವಿರುದ್ಧ ಸಂಬಂಧಪಟ್ಟು ಸಚಿವರಿಗೆ ದೂರು ನೀಡಲಾಗುವುದು ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-29-1396051341</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಡಬ</strong> (ಉಪ್ಪಿನಂಗಡಿ): ಕಡಬ ತಾಲ್ಲೂಕು ಪಂಚಾಯಿತಿ ತ್ರೈಮಾಸಿಕ ಕೆಡಿಪಿ ಸಭೆ 4 ತಿಂಗಳಾದರೂ ನಡೆಯುತ್ತಿಲ್ಲ, ಈ ಬಗ್ಗೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹಾಗೂ ಶಾಸಕರು ಗಮನ ಹರಿಸುತ್ತಿಲ್ಲ ಎಂದು ಆರೋಪಿಸಿ ಕೆಡಿಪಿ ನಾಮನಿರ್ದೇಶಿತ ಸದಸ್ಯರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.</p>.<p>ನಾಮ ನಿರ್ದೇಶಿತ ಸದಸ್ಯರಾದ ಶಿವರಾಮ ರೈ, ಅಶ್ರಫ್ ಶೇಡಿಗುಂಡಿ, ಮೋನಪ್ಪ, ಪದ್ಮನಾಭ ಗೌಡ, ಗಿರೀಶ್ ಬದನೆ, ಉಷಾ ಜೋಯಿ ತಾ.ಪಂ ಕಚೇರಿಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥಾಪಕಿ ಭವ್ಯ ಎಂ.ಅವರೊಂದಿಗೆ ಚರ್ಚೆ ನಡೆಸಿದರು.</p>.<p>ಶಿವರಾಮ ರೈ ಮಾತನಾಡಿ, ಜಿಲ್ಲಾ ಮಟ್ಟದ ಕೆಡಿಪಿ ಸಭೆ ಸರಿಯಾದ ಸಮಯದಲ್ಲಿ ನಡೆಯುತ್ತದೆ. ಕಡಬ ತಾಲ್ಲೂಕು ಕೆಡಿಪಿ ಸಭೆಯನ್ನು ನಡೆಸಲು ನಿರ್ಲಕ್ಷ್ಯ ವಹಿಸಿರುವುದು ಖಂಡನೀಯ ಎಂದರು.</p>.<p>ಅಶ್ರಫ್ ಶೇಡಿಗುಂಡಿ ಮಾತನಾಡಿ, ಸಭೆ ನಡೆಸುವಂತೆ ಒತ್ತಡ ಹಾಕಿದ ಬಳಿಕ ಕಳೆದ ಬಾರಿ ಸಭೆ ನಡೆಸಲಾಗಿದೆ. ಈ ರೀತಿಯಾದರೆ ಜನರ ಸಮಸ್ಯೆಯನ್ನು ಅಧಿಕಾರಿಗಳಿಗೆ ತಿಳಿಯಪಡಿಸುವುದು ಹೇಗೆ ಎಂದು ತಾಲ್ಲೂಕು ಪಂಚಾಯಿತಿ ವ್ಯವಸ್ಥಾಪಕರಲ್ಲಿ ಕೇಳಿದರು. ಶಾಸಕಿ ಸುಳ್ಯದಲ್ಲಿ ಸಭೆ ಮಾಡುತ್ತಾರೆ, ಕಡಬದಲ್ಲಿ ಯಾಕೆ ಮಾಡುತ್ತಿಲ್ಲ ಎಂದರು.</p>.<p>ಕಂದಾಯ ಇಲಾಖೆಯಲ್ಲಿ ಸಮಸ್ಯೆಗಳಿರುವುದರಿಂದ ಕಂದಾಯ ಇಲಾಖೆಯ ಸಭೆಯನ್ನು ಪ್ರತ್ಯೇಕವಾಗಿ ನಡೆಸುತ್ತೇವೆ ಎಂದು ಶಾಸಕಿ ಈ ಹಿಂದಿನ ಸಭೆಯಲ್ಲಿ ಹೇಳಿದ್ದರು. ಇದೀಗ ಆ ಸಭೆಯೂ ನಡೆಯುತ್ತಿಲ್ಲ. ಪಾಲನಾ ವರದಿ ನೀಡುವಂತೆ ತಾಲ್ಲೂಕು ಪಂಚಾಯಿತಿ ವ್ಯವಸ್ಥಾಪಕರಲ್ಲಿ ಕೇಳಿದರು.</p>.<p>ಈ ಬಗ್ಗೆ ಉತ್ತರಿಸಿದ ವ್ಯವಸ್ಥಾಪಕರು, ಸಿಬ್ಬಂದಿ ಕೊರತೆ ಹಾಗೂ ಸಮಯದ ಅಭಾವದಿಂದ ಸಭೆ ನಡೆಸಲು ವಿಳಂಬವಾಗಿದೆ. ಕೂಡಲೇ ಸಭೆ ನಡೆಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿ, ಪಾಲನಾ ವರದಿಯನ್ನು ನೀಡಿದರು.</p>.<p>ಇದೇ ರೀತಿ ಮುಂದುವರಿದರೆ ಅಧಿಕಾರಿಗಳ ವಿರುದ್ಧ ಸಂಬಂಧಪಟ್ಟು ಸಚಿವರಿಗೆ ದೂರು ನೀಡಲಾಗುವುದು ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-29-1396051341</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>