ಮಂಗಳೂರು ರಥಬೀದಿ ಕಾಳಿಕಾಂಬಾ ವಿನಾಯಕ ದೇವಸ್ಥಾನ ಎರಡನೇ ಮೊಕ್ತೇಸರ ಸುಂದರ ಆಚಾರ್ಯ ಬೆಳುವಾಯಿ ಅಧ್ಯಕ್ಷತೆ ವಹಿಸುವರು. ಶ್ರೀ ಕ್ಷೇತ್ರ ಕಟೀಲಿನ ಶ್ರೀಹರಿನಾರಾಯಣದಾಸ ಆಸ್ರಣ್ಣ, ಉದ್ಯಮಿಗಳಾದ ಅಗರಿ ರಾಘವೇಂದ್ರ ರಾವ್, ಶ್ರೀಧರ ರಾವ್ ಕೈಕಂಬ, ಗಣೇಶ ಆಚಾರ್ಯ, ರಾಧಾಕೃಷ್ಣ ಭಜನಾ ಯುವಕ ಸಂಘ ಅಧ್ಯಕ್ಷ ಎಂ. ನರಸಿಂಗ ರೈ, ಕಡಬ ಸಂಸ್ಮರಣಾ ಸಮಿತಿ ಗೌರವಾಧ್ಯಕ್ಷ ಜಿ.ಟಿ. ಆಚಾರ್ಯ ಮುಂಬೈ ಭಾಗವಹಿಸುವರು. ಅರ್ಥಧಾರಿ ಹಿರಣ್ಯ ವೆಂಕಟೇಶ್ವರ ಭಟ್ ಅಭಿನಂದನಾ ಭಾಷಣ ಮಾಡುವರು. ಕಲಾವಿದ ಎಂ.ಕೆ. ರಮೇಶ ಆಚಾರ್ಯ ಸಂಸ್ಮರಣಾ ಭಾಷಣ ಮಾಡುವರು. ಜಿಲ್ಲೆಯ ಪ್ರಸಿದ್ಧ ಕಲಾವಿದರಿಂದ ‘ಧರ್ಮೋ ರಕ್ಷತಿ ರಕ್ಷಿತಃ’ ಯಕ್ಷಗಾನ ತಾಳಮದ್ದಳೆ ಆಯೋಜಿಸಲಾಗಿದೆ ಎಂದು ಸಮಿತಿ ಕಾರ್ಯದರ್ಶಿ ಗಿರೀಶ್ ಕಾವೂರು ತಿಳಿಸಿದ್ದಾರೆ.