ಗದಗ ಜಿಲ್ಲೆಯ ನರಗುಂದ ತಾಲ್ಲೂಕಿನ ಶಿರೋಳ ನಿವಾಸಿಯಾಗಿದ್ದು, ಬೆಂಗಳೂರಿನ ಪೀಠೋಪಕರಣ ತಯಾರಿಕಾ ಕಂಪನಿಯೊಂದರ ಲಾರಿ ಚಾಲಕನಾಗಿದ್ದ ಸಿದ್ದಲಿಂಗನಗೌಡ ಪೊಲೀಸ್ ಪಾಟೀಲ್ (29) ಬಂಧಿತ ಆರೋಪಿ. ಮಂಗಳೂರು ಪೂರ್ವ (ಕದ್ರಿ) ಸಂಚಾರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಚಾಲಕನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.