ಸರ್ಕಾರದ ಆದೇಶದನ್ವಯ ಹಾಗೂ ಜಿಲ್ಲಾಧಿಕಾರಿ ಅನುಮತಿಯ ಮೇರೆಗೆ ಕದ್ರಿ ಉದ್ಯಾನವನ್ನು ಇದೇ 20 ರಿಂದ ಬೆಳಿಗ್ಗೆ 7 ರಿಂದ 9 ಗಂಟೆವರೆಗೆ ಹಾಗೂ ಸಂಜೆ 4 ಗಂಟೆಯಿಂದ 7 ಗಂಟೆವರೆಗೆ ವಾಯುವಿಹಾರಕ್ಕೆ ಮಾತ್ರ ಅವಕಾಶವನ್ನು ಕಲ್ಪಿಸಲಾಗಿದೆ. ಕಡ್ಡಾಯವಾಗಿ ಮಾಸ್ಕ್ ಹಾಗೂ ಸುರಕ್ಷಿತ ಅಂತರವನ್ನು ಕಾಪಾಡಿಕೊಳ್ಳಬೇಕು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.