ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಜೂರು ಮಖಾಂ ಉರುಸ್‌ಗೆ ಚಾಲನೆ

Published 4 ಮೇ 2024, 5:03 IST
Last Updated 4 ಮೇ 2024, 5:03 IST
ಅಕ್ಷರ ಗಾತ್ರ

ಬೆಳ್ತಂಗಡಿ: ‘ನಮ್ಮ ವಸ್ತ್ರಧಾರಣೆ ಮತ್ತು ನಮ್ಮ ಬಾಹ್ಯ ಸೌಂದರ್ಯದ ಮೇಲೆ ಅಲ್ಲಾಹನ ನೋಟ ಇರುವುದಲ್ಲ. ಅವನ ನೋಟ ನಮ್ಮ ಪರಿಶುದ್ಧ ಅಂತರ ಮನಸಿನ ಮೇಲೆ ಇರುತ್ತದೆ. ಈ ಕಾರಣದಿಮದ ಪರಸ್ಪರ ಅಸೂಯೆ ಇಲ್ಲದ, ದ್ವೇಷ ಹಗೆತನವಿಲ್ಲದ, ಅಹಂಕಾರವಿಲ್ಲದ, ಶುದ್ಧ ಹೃದಯಿಗಳಾಗೋಣ. ಆ ಮೂಲಕ ಅವನ ಇಷ್ಟದಾಸರಾದ ಔಲಿಯಾಗಳ ಕೃಪೆ ಪಡೆಯೋಣ. ನಮ್ಮನ್ನು ಅವರು ನಿಯಂತ್ರಿಸುತ್ತಿದ್ದಾರೆ ಎಂಬ ಸತ್ಯ ವಿಶ್ವಾಸ ಹೊಂದೋಣ’ ಎಂದು ದಕ್ಷಿಣ ಕನ್ನಡ ಜಿಲ್ಲಾ ಸುನ್ನಿ ಸಂಯುಕ್ತ ಜಮಾಅತ್ ಖಾಝಿ ಸಯ್ಯಿದ್ ಕೂರತ್ ತಂಙಳ್ ಹೇಳಿದರು.

ಕಾಜೂರು ದರ್ಗಾ ಶರೀಫ್‌ನಲ್ಲಿ ಶುಕ್ರವಾರ ನಡೆದ ಉರುಸ್ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಆಶೀರ್ವಚನ ನೀಡಿದರು.

ಉರುಸ್‌ ಅನ್ನು ತಾಲ್ಲೂಕು ‌ಸಂಯುಕ್ತ ಜಮಾಅತ್ ಸಹಾಯಕ ಖಾಝಿ ಸಯ್ಯಿದ್ ಸಾದಾತ್ ತಂಙಳ್ ಉದ್ಘಾಟಿಸಿದರು.

ಜಿಲ್ಲಾ ವಕ್ಫ್ ಸಲಹಾ ಸಮಿತಿ ಉಪಾಧ್ಯಕ್ಷ ಪಕೀರಬ್ಬ ಮಾಸ್ಟರ್ ಮರೋಡಿ ಮಾತನಾಡಿ, ಕಾಜೂರು‌ ಇಂದು ಶೈಕ್ಷಣಿಕವಾಗಿ, ಮೂಲಸೌಕರ್ಯ ವಿಚಾರವಾಗಿ ಭಾರಿ ವೇಗದಿಂದ ಬೆಳೆಯುತ್ತಿದೆ. ಇದಕ್ಕಾಗಿ ಇಲ್ಲಿನ‌ ಸಮಿತಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ವಕೀಲ ನೂರುದ್ದೀನ್ ಸಾಲ್ಮರ,‌ ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಪ್ರಧಾನ ಕಾರ್ಯದರ್ಶಿ ನಝೀರ್ ಮಠ, ಸಯ್ಯದ್ ಕಾಜೂರು ತಂಙಳ್, ಸಂಯುಕ್ತ ಜಮಾಅತ್ ಅಧ್ಯಕ್ಷ ಸಯ್ಯಿದ್ ಇಸ್ಮಾಯಿಲ್ ತಂಙಳ್ ಮಾತನಾಡಿದರು.

ಕೂರತ್ ತಂಙಳ್, ಸಾದಾತ್ ತಂಙಳ್, ಇಸ್ಮಾಯಿಲ್ ತಂಙಳ್ ಅವರನ್ನು ಅಭಿನಂದಿಸಲಾಯಿತು.

ಉರುಸ್‌ ಸಮಿತಿ ಉಪಾಧ್ಯಕ್ಷ ಅಬ್ದುಲ್ ಅಝೀಝ್ ಝುಹುರಿ ಕಿಲ್ಲೂರು, ಪ್ರಧಾನ ಕಾರ್ಯದರ್ಶಿ ಜೆ.ಎಚ್.ಅಬೂಬಕ್ಕರ್ ಸಿದ್ದೀಕ್ ಕಾಜೂರು, ಜತೆ ಕಾರ್ಯದರ್ಶಿ ಶಾಹುಲ್ ಹಮೀದ್ ಕಿಲ್ಲೂರು, ಕೋಶಾಧಿಕಾರಿ ಕೆ.ಎಂ.ಕಮಾಲ್ ಕಾಜೂರು, ಕಾಜೂರು ಮುದರ್ರಿಸ್ ಮುಹಮ್ಮದ್ ತೌಸೀಫ್ ಸ‌ಅದಿ ಹರೇಕಳ, ಕಿಲ್ಲೂರು ಖತೀಬ್ ಶಂಶೀರ್ ಸಖಾಫಿ ಪರಪ್ಪು, ವಿವಿಧ ಮಸೀದಿ ಅಧ್ಯಕ್ಷರಾದ ಬಿ.ಎಂ.ಅಬ್ದುಲ್‌ ಹಮೀದ್‌ ಉಜಿರೆ, ಅಬ್ದುಲ್ ಬಶೀರ್ ಮುಂಡಾಜೆ, ಇಬ್ರಾಹಿಂ ಅರೆಕ್ಕಲ್ ಕಕ್ಕಿಂಜೆ, ಪ್ರಮುಖರಾದ ಯು.ಎ.ಹಮೀದ್ ಉಜಿರೆ, ಎಂ.ಎ.ಕಾಸಿಂ ಮಲ್ಲಿಗೆಮನೆ ಕಿಲ್ಲೂರು, ಅಬ್ದುಲ್‌ರಝಾಕ್‌ ಸಖಾಫಿ ಮಡಂತ್ಯಾರು, ಸಯ್ಯಿದ್‌ ಹಬೀಬ್ ಸಾಹೇಬ್ ಮಂಜೊಟ್ಟಿ, ಸಿರಾಜುದ್ದೀನ್ ಸಖಾಫಿ, ಕಾಸಿಂ ಮುಸ್ಲಿಯಾರ್ ಮಾಚಾರು, ವಝೀರ್ ಮುಹಮ್ಮದ್ ಬಂಗಾಡಿ, ಗ್ರಾಮ ಪಂಚಾಯಿತಿ ಸದಸ್ಯ ಅಹಮದ್ ಕಬೀರ್ ಕಾಜೂರು, ಅಬ್ದುಲ್ ಸತ್ತಾರ್ ಸಾಹೇಬ್ ಬಂಗಾಡಿ, ಅಬ್ಬೋನು ಮದ್ದಡ್ಕ, ಖಾಲಿದ್ ಪುಲಾಬೆ, ಹಮೀದ್ ನೆಕ್ಕರೆ ಮುಂಡಾಜೆ, ಲುಕ್ಮಾನುಲ್ ಹಕೀಂ ಧರ್ಮಸ್ಥಳ, ಮುಹಮ್ಮದ್ ಸಲೀಂ ಪಿಚಲಾರು, ಬಿ.ಅಶ್ರಫ್ ನೆರಿಯ, ಜೆ.ಎಚ್.ಅಬ್ಬಾಸ್, ಕಾಜೂರು ಮಾಜಿ ಅಧ್ಯಕ್ಷರಾದ ಬಿ.ಎ.ಯೂಸುಫ್ ಶರೀಫ್, ಇಬ್ರಾಹಿಂ ಮದನಿ, ಕೆ.ಯು.ಉಮರ್ ಸಖಾಫಿ ಭಾಗವಹಿಸಿದ್ದರು. ಕಾಜೂರು ಮತ್ತು ಕಿಲ್ಲೂರು ಜಂಟಿ ಜಮಾಅತ್‌ಗಳ ಉರುಸ್ ಸಮಿತಿ ಪದಾಧಿಕಾರಿಗಳು ಸಹಕರಿಸಿದರು.

ಉರುಸ್ ಸಮಿತಿ ಅಧ್ಯಕ್ಷ ಕೆ.ಯು.ಇಬ್ರಾಹಿಂ ಸ್ವಾಗತಿಸಿದರು. ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ ನಿರೂಪಿಸಿದರು. ಜಿಲ್ಲಾ ವಕ್ಫ್ ಸಲಹಾ ಸಮಿತಿ ಸದಸ್ಯ ಜೆ.ಎಚ್.ಅಬೂಬಕ್ಕರ್ ಸಿದ್ದೀಕ್ ಕಾಜೂರು ವಂದಿಸಿದರು.

ಕಿಲ್ಲೂರಿನಿಂದ ಸಂದಲ್ ಮೆರವಣಿಗೆ: ಉರುಸ್ ಆರಂಭದಲ್ಲಿ ಕಿಲ್ಲೂರಿನಿಂದ ಸಂದಲ್ ಮೆರವಣಿಗೆ ಆಗಮಿಸಿ ಕಾಜೂರಿನಲ್ಲಿ‌ ಅದನ್ನು ಬರಮಾಡಿಕೊಳ್ಳಲಾಯಿತು. ನಾಡಿನ ಸುಭೀಕ್ಷೆಗಾಗಿ ದರ್ಗಾ ಶರೀಫ್‌ನಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಿತು. ಬಳಿಕ ಉರುಸ್ ಸಮಿತಿ ಅಧ್ಯಕ್ಷ ಕೆ.ಯು.ಇಬ್ರಾಹಿಂ ಧ್ವಜಾರೋಹಣ ನೆರವೇರಿಸಿದರು.

ಧಾರ್ಮಿಕ ಉಪನ್ಯಾಸ ಮಾಲಿಕೆ ಉದ್ಘಾಟನೆ: ಉರುಸ್ ಪ್ರಯುಕ್ತ ಮುಂದಿನ 10 ದಿನಗಳಲ್ಲಿ ಧಾರ್ಮಿಕ ಉಪನ್ಯಾಸ ಮಾಲಿಕೆಗೆ ಕಾಜೂರು ತಂಙಳ್ ಚಾಲನೆ ನೀಡಿದರು. ಆರಂಭದ ದಿನ ಕಿಲ್ಲೂರು ಮಸ್ಜಿದ್ ಖತೀಬ್ ಶಂಶೀರ್ ಸಖಾಫಿ ಪರಪ್ಪು ಪ್ರವಚನ‌ ನಡೆಸಿಕೊಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT