ಅಂದು ಬೆಳಿಗ್ಗೆ ಉಳಿ ಗೋಪಾಕೃಷ್ಣ ದೇವಸ್ಥಾನದ ಪ್ರಧಾನ ಅರ್ಚಕ ಯೋಗೀಂದ್ರ ಭಟ್ ಕಂಬಳಕ್ಕೆ ಚಾಲನೆ ನೀಡಲಿದ್ದು, ಸಂಜೆ ನಡೆಯುವ ಸಮಾರೋಪದಲ್ಲಿ ಸಚಿವರಾದ ವಿ.ಸುನಿಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಮತ್ತಿತರರು ಭಾಗವಹಿಸುವರು. ರಾಜ್ಯೋತ್ಸವ ಮತ್ತು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ ನಡೆಯಲಿದೆ ಎಂದರು.