ಬಂಟ್ವಾಳ: ಇಲ್ಲಿನ ಉಳಿ ಗ್ರಾಮದ ಕಕ್ಯಪದವು ಮೈರ ಬರ್ಕೆಜಾಲು ಎಂಬಲ್ಲಿ ರಾಮಾಂಜನೇಯ ಗೆಳೆಯರ ಬಳಗದ ವತಿಯಿಂದ ಶನಿವಾರ ಆರಂಭಗೊಂಡ 10ನೇ ವರ್ಷದ ಹೊನಲು ಬೆಳಕಿನ ‘ಸತ್ಯ-ಧರ್ಮ’ ಜೋಡುಕರೆ ಬಯಲು ಕಂಬಳ ಭಾನುವಾರ ರಾತ್ರಿ ಸಮಾರೋಪಗೊಂಡಿತು.
ಈ ವರ್ಷದ ಪ್ರಥಮ ಕಂಬಳದಲ್ಲಿ ಒಟ್ಟು 214 ಜೊತೆ ಕೋಣಗಳು ಭಾಗವಹಿಸಿ ಗಮನ ಸೆಳೆದಿದೆ. ಕನೆಹಲಗೆಯಲ್ಲಿ 2 ಜೊತೆ, ಅಡ್ಡಹಲಗೆ 9, ಹಗ್ಗ ಹಿರಿಯ 19, ನೇಗಿಲು ಹಿರಿಯ 31, ಹಗ್ಗ ಕಿರಿಯ 26, ನೇಗಿಲು ಕಿರಿಯ 75, ನೇಗಿಲು ಸಬ್ ಸಬ್ ಜೂನಿಯರ್ ವಿಭಾಗದಲ್ಲಿ 52 ಜೊತೆ ಕೋಣಗಳು ಭಾಗವಹಿಸಿದ್ದವು.
ಫಲಿತಾಂಶ:
ಕನೆಹಲಗೆ: ಎರಡು ಜೊತೆ ಸಮಾನ ಬಹುಮಾನ ಹಂಚಿಕೊಂಡಿದೆ. ಬೇಲಾಡಿ ಬಾವ ಅಶೋಕ್ ಶೆಟ್ಟಿ, ಹಲಗೆ ಮುಟ್ಟಿದವರು– ತೆಕ್ಕಟ್ಟೆ ಸುಧೀರ್ ದೇವಾಡಿಗ ಮತ್ತು ವಾಮಂಜೂರು ತಿರುವೈಲುಗುತ್ತು ನವೀನ್ ಚಂದ್ರ ಆಳ್ವ ಹಲಗೆ ಮುಟ್ಟಿದವರು– ಬೈಂದೂರು ಭಾಸ್ಕರ ದೇವಾಡಿಗ