ವಾಮಂಜೂರು ತಿರುವೈಲು ಶ್ರೀ ಅಮೃತೇಶ್ವರ ದೇವಸ್ಥಾನದ ಎದುರಿನ ತಿರುವೈಲು ಗುತ್ತಿನಲ್ಲಿ ಕಂಬಳ ನಡೆಯುತ್ತಿದೆ. ಕಂಬಳದಲ್ಲಿ 150ಕ್ಕೂ ಹೆಚ್ಚು ಕೋಣಗಳ ಜತೆ ಭಾಗವಹಿಸಿದ್ದು, ಕರಾವಳಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಗಣೇಶ್ ರಾವ್ ಚಾಲನೆ ನೀಡಿದರು. ಮಾಜಿ ಸಚಿವ ರಮಾನಾಥ ರೈ, ಕಾಂಗ್ರೆಸ್ ಮುಖಂಡ ಮಿಥುನ್ ರೈ ಮತ್ತಿತರ ಪ್ರಮುಖರು ಪಾಲ್ಗೊಂಡರು.