ಬಂಟ್ವಾಳ: ಇಲ್ಲಿನ ಕಕ್ಯಪದವು ಮೈರ ಎಂಬಲ್ಲಿ ಶನಿವಾರ ಆರಂಭಗೊಂಡ 8ನೇ ವರ್ಷದ ‘ಸತ್ಯ - ಧರ್ಮ’ ಜೋಡುಕರೆ ಬಯಲು ಕಂಬಳ ಭಾನುವಾರ ಸಂಜೆ ಮುಕ್ತಾಯಗೊಂಡಿತು. ಈ ಕಂಬಳದಲ್ಲೂ ಮಿಜಾರು ಅಶ್ವತ್ಥಪುರ ಶ್ರೀನಿವಾಸ ಗೌಡ ಅವರು ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ.
ಹಗ್ಗ ಹಿರಿಯ, ಹಗ್ಗ ಕಿರಿಯ ಮತ್ತು ನೇಗಿಲು ಹಿರಿಯ ವಿಭಾಗದ ಕೋಣಗಳನ್ನು ಓಡಿಸಿದ ಶ್ರೀನಿವಾಸ ಗೌಡ ಮೂರೂ ವಿಭಾಗದಲ್ಲೂ ಪ್ರಥಮ ಬಹುಮಾನ ಪಡೆದಿದ್ದಾರೆ.