ಕಳೆದ ವಾರ ಕಾರ್ಕಳದ ಮಿಯಾರಿನಲ್ಲಿ ನಡೆದ ಕಂಬಳದಲ್ಲಿ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಭಾಗವಹಿಸಿದ್ದರು. ಈ ಸಂದರ್ಭ ಅಲ್ಲಿನ ಕಂಬಳ ಸಮಿತಿ ಅಧ್ಯಕ್ಷ, ಶಾಸಕ ವಿ.ಸುನೀಲ್ ಕುಮಾರ್ ಅವರು ‘ತುಳುನಾಡಿನ ಕಂಬಳ ಕ್ರೀಡೆಗೆ ಪ್ರೋತ್ಸಾಹಧನ ನೀಡಬೇಕು. ರಾಷ್ಟ್ರೀಯ, ಅಂತರರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆ ಮುತುವರ್ಜಿ ವಹಿಸಬೇಕು’ ಎಂದು ಆಗ್ರಹಿಸಿದ್ದರು. ಇದಕ್ಕೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ, ಕಂಬಳಗಳ ಮಾಹಿತಿಯನ್ನು ಸಂಗ್ರಹಿಸಲು ಉಭಯ ಜಿಲ್ಲೆಗಳ ಅಧಿಕಾರಿಗಳಿಗೆ ಸೂಚಿಸಿದ್ದರು.