<p>ಮುಡಿಪು: ‘ವಚನ ಮತ್ತು ದಾಸ ಸಾಹಿತ್ಯವು ಅಪ್ಪಟ ದೇಸೀ ಚಳವಳಿಗಳು’ ಎಂದು ಹಿರಿಯ ಕವಿ ಬಿ.ಆರ್. ಲಕ್ಷ್ಮಣ ರಾವ್ ಹೇಳಿದರು.</p>.<p>ಮಂಗಳೂರು ವಿಶ್ವವಿದ್ಯಾಲಯದ ಕನಕದಾಸ ಸಂಶೋಧನ ಕೇಂದ್ರದ ವತಿಯಿಂದ ಮಂಗಳೂರಿನ ರಾಮಕೃಷ್ಣ ಕಾಲೇಜಿನಲ್ಲಿ ಶನಿವಾರ ನಡೆದ ಶೈಕ್ಷಣಿಕ ಸಂಸ್ಥೆಗಳ ಹಾಗೂ ಸಾರ್ವಜನಿಕರ ಸಾಮುದಾಯಿಕ ಪಾಲ್ಗೊಳ್ಳುವಿಕೆಯ ಕನಕದಾಸರ ಕೀರ್ತನ ಗಾಯನ ಕಾರ್ಯಕ್ರಮ ‘ಕನಕ ಕೀರ್ತನ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ವಚನ ಸಾಹಿತ್ಯದ ಸಾಮಾಜಿಕ ಪರಿವರ್ತನೆಯ ಆಶಯವನ್ನು, ದಾಸ ಸಾಹಿತ್ಯವೂ ಸಂಗೀತದ ಮೂಲಕ ಜನರ ಸಾಮಾನ್ಯರ ಬಳಿಗೆ ತಲಪಿಸಿತು. ಕನಕದಾಸರ ಕೀರ್ತನೆಗಳು ಈ ಎರಡು ದೇಸೀ ಸಾಹಿತ್ಯ ಚಳವಳಿಗಳ ಆಶಯಗಳನ್ನು ತುಂಬಿಕೊಂಡು ಕಾವ್ಯಾತ್ಮಕ ಅಭಿವ್ಯಕ್ತಿಯನ್ನು ಹೊಂದಿದೆ’ ಎಂದು ಅವರು ವಿಶ್ಲೇಷಿಸಿದರು.</p>.<p>‘ಕನ್ನಡದ ಭಾವಗೀತೆಗಳ ಮೇಲೆ ದಾಸ ಸಾಹಿತ್ಯದ ಕೀರ್ತನೆಗಳ ಪ್ರಭಾವ ಬಹಳಷ್ಟಿದೆ. ಕನಕರ ಕೀರ್ತನೆಗಳಲ್ಲಿ ಸಂಗೀತಾಂಶಗಳೂ ಹೇರಳವಾಗಿದ್ದು, ಸಂಗೀತಾಭ್ಯಾಸಿಗಳು, ಹಾಡುಗಾರರು ಈ ಕೀರ್ತನೆಗಳನ್ನು ಜನಪ್ರಿಯಗೊಳಿಸಬೇಕು’ ಎಂದು ಆಶಯ ವ್ಯಕ್ತಪಡಿಸಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಮಂಗಳೂರು ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಎ.ಎಂ. ಖಾನ್ ಮಾತನಾಡಿ, ‘ಕನಕರು, ತಮ್ಮ ಚಿಂತನೆಗಳ ಮೂಲಕ ವರ್ತಮಾನದ ಸಾಮಾಜಿಕ ಸಂದರ್ಭದಲ್ಲಿ ಮುಖ್ಯವಾಗುತ್ತಾರೆ’ ಎಂದರು.</p>.<p>ಮಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಕೆ. ರಮೇಶ್, ಬಂಟರ ಯಾನೆ ನಾಡವರ ಮಾತೃ ಸಂಘದ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ಶೆಟ್ಟಿ, ಉಪನ್ಯಾಸಕ ನಟೇಶ್ ಆಳ್ವ ಇದ್ದರು.</p>.<p>ಕನಕದಾಸ ಸಂಶೋಧನ ಕೇಂದ್ರದ ಸಂಯೋಜಕ ಡಾ. ಧನಂಜಯ ಕುಂಬ್ಳೆ ಪ್ರಾಸ್ತಾವಿಕವಾಗಿ ಮಾತಾಡಿದರು. ರಾಮಕೃಷ್ಣ ಕಾಲೇಜಿನ ಪ್ರಾಂಶುಪಾಲ ಪ್ರೊ.ಬಾಲಕೃಷ್ಣ ಶೆಟ್ಟಿ, ಕನಕದಾಸ ಕೇಂದ್ರದ ಸಂಶೋಧನ ಸಹಾಯಕ ಆನಂದ ಎಂ. ಕಿದೂರು, ಉಪನ್ಯಾಸಕ ವಿಶ್ವಗಣಪತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಡಿಪು: ‘ವಚನ ಮತ್ತು ದಾಸ ಸಾಹಿತ್ಯವು ಅಪ್ಪಟ ದೇಸೀ ಚಳವಳಿಗಳು’ ಎಂದು ಹಿರಿಯ ಕವಿ ಬಿ.ಆರ್. ಲಕ್ಷ್ಮಣ ರಾವ್ ಹೇಳಿದರು.</p>.<p>ಮಂಗಳೂರು ವಿಶ್ವವಿದ್ಯಾಲಯದ ಕನಕದಾಸ ಸಂಶೋಧನ ಕೇಂದ್ರದ ವತಿಯಿಂದ ಮಂಗಳೂರಿನ ರಾಮಕೃಷ್ಣ ಕಾಲೇಜಿನಲ್ಲಿ ಶನಿವಾರ ನಡೆದ ಶೈಕ್ಷಣಿಕ ಸಂಸ್ಥೆಗಳ ಹಾಗೂ ಸಾರ್ವಜನಿಕರ ಸಾಮುದಾಯಿಕ ಪಾಲ್ಗೊಳ್ಳುವಿಕೆಯ ಕನಕದಾಸರ ಕೀರ್ತನ ಗಾಯನ ಕಾರ್ಯಕ್ರಮ ‘ಕನಕ ಕೀರ್ತನ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ವಚನ ಸಾಹಿತ್ಯದ ಸಾಮಾಜಿಕ ಪರಿವರ್ತನೆಯ ಆಶಯವನ್ನು, ದಾಸ ಸಾಹಿತ್ಯವೂ ಸಂಗೀತದ ಮೂಲಕ ಜನರ ಸಾಮಾನ್ಯರ ಬಳಿಗೆ ತಲಪಿಸಿತು. ಕನಕದಾಸರ ಕೀರ್ತನೆಗಳು ಈ ಎರಡು ದೇಸೀ ಸಾಹಿತ್ಯ ಚಳವಳಿಗಳ ಆಶಯಗಳನ್ನು ತುಂಬಿಕೊಂಡು ಕಾವ್ಯಾತ್ಮಕ ಅಭಿವ್ಯಕ್ತಿಯನ್ನು ಹೊಂದಿದೆ’ ಎಂದು ಅವರು ವಿಶ್ಲೇಷಿಸಿದರು.</p>.<p>‘ಕನ್ನಡದ ಭಾವಗೀತೆಗಳ ಮೇಲೆ ದಾಸ ಸಾಹಿತ್ಯದ ಕೀರ್ತನೆಗಳ ಪ್ರಭಾವ ಬಹಳಷ್ಟಿದೆ. ಕನಕರ ಕೀರ್ತನೆಗಳಲ್ಲಿ ಸಂಗೀತಾಂಶಗಳೂ ಹೇರಳವಾಗಿದ್ದು, ಸಂಗೀತಾಭ್ಯಾಸಿಗಳು, ಹಾಡುಗಾರರು ಈ ಕೀರ್ತನೆಗಳನ್ನು ಜನಪ್ರಿಯಗೊಳಿಸಬೇಕು’ ಎಂದು ಆಶಯ ವ್ಯಕ್ತಪಡಿಸಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಮಂಗಳೂರು ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಎ.ಎಂ. ಖಾನ್ ಮಾತನಾಡಿ, ‘ಕನಕರು, ತಮ್ಮ ಚಿಂತನೆಗಳ ಮೂಲಕ ವರ್ತಮಾನದ ಸಾಮಾಜಿಕ ಸಂದರ್ಭದಲ್ಲಿ ಮುಖ್ಯವಾಗುತ್ತಾರೆ’ ಎಂದರು.</p>.<p>ಮಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಕೆ. ರಮೇಶ್, ಬಂಟರ ಯಾನೆ ನಾಡವರ ಮಾತೃ ಸಂಘದ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ಶೆಟ್ಟಿ, ಉಪನ್ಯಾಸಕ ನಟೇಶ್ ಆಳ್ವ ಇದ್ದರು.</p>.<p>ಕನಕದಾಸ ಸಂಶೋಧನ ಕೇಂದ್ರದ ಸಂಯೋಜಕ ಡಾ. ಧನಂಜಯ ಕುಂಬ್ಳೆ ಪ್ರಾಸ್ತಾವಿಕವಾಗಿ ಮಾತಾಡಿದರು. ರಾಮಕೃಷ್ಣ ಕಾಲೇಜಿನ ಪ್ರಾಂಶುಪಾಲ ಪ್ರೊ.ಬಾಲಕೃಷ್ಣ ಶೆಟ್ಟಿ, ಕನಕದಾಸ ಕೇಂದ್ರದ ಸಂಶೋಧನ ಸಹಾಯಕ ಆನಂದ ಎಂ. ಕಿದೂರು, ಉಪನ್ಯಾಸಕ ವಿಶ್ವಗಣಪತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>