<p><strong>ಉಳ್ಳಾಲ</strong>: ‘ತೌಳವ ಪ್ರಾಂತ್ಯದ ಜೀವನ ಕ್ರಮ ಒಟ್ಟು ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ. ಜಿಲ್ಲೆಯ ಜನ ಕೃಷಿ ಸಂಸ್ಕೃತಿಯಲ್ಲಿ ಬದುಕು ಕಟ್ಟಿಕೊಂಡವರು. ಅನುಷ್ಠಾನದಲ್ಲಿ ಯಾವತ್ತಿದ್ದರೂ ಗಟ್ಟಿ ಕನ್ನಡಿಗರಾಗಿದ್ದೇವೆ’ ಎಂದು ಕನ್ನಡ ಸಾಹಿತ್ಯ ಪರಿಷತ್ನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ನಿಕಟಪೂರ್ವ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಹೇಳಿದರು.</p>.<p>ದೇರಳಕಟ್ಟೆಯ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯೋತ್ಸವದ ಧ್ವಜಾರೋಹಣ ಮಾಡಿ ಅವರು ಮಾತನಾಡಿದರು.<br />‘ಯಕ್ಷಗಾನ ವಿದ್ವಾಂಸ ಡಾ. ಪ್ರಭಾಕರ ಜೋಷಿ ಅವರ ಮನೆ ಭಾಷೆ ಮರಾಠಿ, ಕುಂಬ್ಳೆ ಸುಂದರ ರಾವ್, ಅಮೃತ ಸೋಮೇಶ್ವರ ಅವರ ಮನೆ ಭಾಷೆ ಮಲಯಾಳಂ, ಡಾ ಜಬ್ಬಾರ್ ಸಮೊ ಮನೆ ಭಾಷೆ ಬ್ಯಾರಿ, ಇದಿನಬ್ಬರ ಮನೆಯ ಭಾಷೆ ಬೇರೆಯೇ ಆಗಿದ್ದರೂ ಅವರೆಲ್ಲರೂ ಕನ್ನಡ ಭಾಷೆಯನ್ನು ಮೇಲ್ಮಟ್ಟಕ್ಕೆ ತರಲು ಸದಾ ಪ್ರಯತ್ನಿಸುತ್ತಿದ್ದಾರೆ’ ಎಂದರು.</p>.<p>ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ ಡಾ. ಕೆ. ಸತೀಶ್ ಕುಮಾರ್ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಕ್ಷೇಮ ವೈದ್ಯಕೀಯ ಅಧೀಕ್ಷಕ ಮೇಜರ್ ಡಾ. ಶಿವಕುಮಾರ್ ಹೀರೇಮಠ, ಎನ್ಎಸ್ಎಸ್ ನಿಕಟಪೂರ್ವ ಸಂಯೋಜಕಿ ಡಾ. ಸುಮಲತಾ, ಸಾರ್ವಜನಿಕ ಸಂಪರ್ಕ ಅಧಿಕಾರಿ ಹೇಮಂತ್ ಶೆಟ್ಟಿ ಇದ್ದರು. ಡಾ. ಸಾಯಿಗೀತಾ ಹಾಗೂ ಸುಮಿತಾ ಚೌಟ ನಿರೂಪಿಸಿದರು.<br /> ಶಶಿಕುಮಾರ್ ಶೆಟ್ಟಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಳ್ಳಾಲ</strong>: ‘ತೌಳವ ಪ್ರಾಂತ್ಯದ ಜೀವನ ಕ್ರಮ ಒಟ್ಟು ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ. ಜಿಲ್ಲೆಯ ಜನ ಕೃಷಿ ಸಂಸ್ಕೃತಿಯಲ್ಲಿ ಬದುಕು ಕಟ್ಟಿಕೊಂಡವರು. ಅನುಷ್ಠಾನದಲ್ಲಿ ಯಾವತ್ತಿದ್ದರೂ ಗಟ್ಟಿ ಕನ್ನಡಿಗರಾಗಿದ್ದೇವೆ’ ಎಂದು ಕನ್ನಡ ಸಾಹಿತ್ಯ ಪರಿಷತ್ನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ನಿಕಟಪೂರ್ವ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಹೇಳಿದರು.</p>.<p>ದೇರಳಕಟ್ಟೆಯ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯೋತ್ಸವದ ಧ್ವಜಾರೋಹಣ ಮಾಡಿ ಅವರು ಮಾತನಾಡಿದರು.<br />‘ಯಕ್ಷಗಾನ ವಿದ್ವಾಂಸ ಡಾ. ಪ್ರಭಾಕರ ಜೋಷಿ ಅವರ ಮನೆ ಭಾಷೆ ಮರಾಠಿ, ಕುಂಬ್ಳೆ ಸುಂದರ ರಾವ್, ಅಮೃತ ಸೋಮೇಶ್ವರ ಅವರ ಮನೆ ಭಾಷೆ ಮಲಯಾಳಂ, ಡಾ ಜಬ್ಬಾರ್ ಸಮೊ ಮನೆ ಭಾಷೆ ಬ್ಯಾರಿ, ಇದಿನಬ್ಬರ ಮನೆಯ ಭಾಷೆ ಬೇರೆಯೇ ಆಗಿದ್ದರೂ ಅವರೆಲ್ಲರೂ ಕನ್ನಡ ಭಾಷೆಯನ್ನು ಮೇಲ್ಮಟ್ಟಕ್ಕೆ ತರಲು ಸದಾ ಪ್ರಯತ್ನಿಸುತ್ತಿದ್ದಾರೆ’ ಎಂದರು.</p>.<p>ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ ಡಾ. ಕೆ. ಸತೀಶ್ ಕುಮಾರ್ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಕ್ಷೇಮ ವೈದ್ಯಕೀಯ ಅಧೀಕ್ಷಕ ಮೇಜರ್ ಡಾ. ಶಿವಕುಮಾರ್ ಹೀರೇಮಠ, ಎನ್ಎಸ್ಎಸ್ ನಿಕಟಪೂರ್ವ ಸಂಯೋಜಕಿ ಡಾ. ಸುಮಲತಾ, ಸಾರ್ವಜನಿಕ ಸಂಪರ್ಕ ಅಧಿಕಾರಿ ಹೇಮಂತ್ ಶೆಟ್ಟಿ ಇದ್ದರು. ಡಾ. ಸಾಯಿಗೀತಾ ಹಾಗೂ ಸುಮಿತಾ ಚೌಟ ನಿರೂಪಿಸಿದರು.<br /> ಶಶಿಕುಮಾರ್ ಶೆಟ್ಟಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>