ರಾಜ್ಯೋತ್ಸವ ನಿಮಿತ್ತ ನಗರದ ನೆಹರೂ ಕ್ರೀಡಾಂಗಣದಲ್ಲಿ ಸಚಿವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಸಂದೇಶ ನೀಡುವರು. ನಾಡಗೀತೆ ಹಾಗೂ ರೈತ ಗೀತೆಯನ್ನು ಹಾಡುವ ಶಿಕ್ಷಕ ವೃಂದ ಉತ್ತಮವಾಗಿ ತಾಲೀಮುನಡೆಸಿರಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಜವಾಬ್ದಾರಿ ವಹಿಸಬೇಕು ಎಂದರು. ಮಂಗಳೂರು ಮಹಾನಗರ ಪಾಲಿಕೆ ಹಾಗೂ ಲೋಕೋಪಯೋಗಿ ಇಲಾಖೆ ಕ್ರೀಡಾಂಗಣ ಶುಚೀಕರಣ, ಸಮತಟ್ಟು ಮಾಡುವ ಕೆಲಸ ನಡೆಸಬೇಕು, ಮಳೆಗೆ ಪೆಂಡಾಲ್ಗಳನ್ನು ಹಾಕಬೇಕು ಎಂದು ಇಲಾಖೆಗಳ ಮುಖ್ಯಸ್ಥರಿಗೆ ಅವರು ನಿರ್ದೇಶನ ನೀಡಿದರು.