ಮಂಗಳವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಂಬಂಧ ಡಿ.13ರಂದು ಬೆಂಗಳೂರಿನಲ್ಲಿ ನಿವೃತ್ತ ನ್ಯಾಯಾಧೀಶರು, ಕನ್ನಡ ಪರ ಸಂಘಟನೆಗಳು, ಹೋರಾಟಗಾರರನ್ನು ಒಳಗೊಂಡ ಸಭೆ ನಡೆಸಿ ನಿರ್ಣಯ ಕೈಗೊಳ್ಳಲಾಗುವುದು. ರಾಜ್ಯದಲ್ಲಿ ಪ್ರಸ್ತುತ 27 ಸಾವಿರ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯದ ಕೊರತೆ ಇದೆ. ಮೂಲ ಸೌಕರ್ಯ ಕೊರತೆ ಇರುವ ಶಾಲೆಗಳಲ್ಲಿ ಹೆಚ್ಚು ಮಕ್ಕಳನ್ನು ನಿರೀಕ್ಷಿಸಲು ಸಾಧ್ಯವಾಗದು. ಈ ಬಗ್ಗೆಯೂ ಚರ್ಚಿಸಲಾಗುವುದು ಎಂದರು.