<p><strong>ಮಂಗಳೂರು</strong>: ಕಾಂತಾವರ ಕನ್ನಡ ಸಂಘದ ವಾರ್ಷಿಕ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು ಮೊಗಸಾಲೆ ಪ್ರತಿಷ್ಠಾನ ನೀಡುವ ಸಾಹಿತ್ಯ ಪ್ರಶಸ್ತಿಗೆ ಕಾಸರಗೋಡಿನ ಕವಿ ರಾಧಾಕೃಷ್ಣ ಉಳಿಯತ್ತಡ್ಕ ಅವರನ್ನು ಆಯ್ಕೆ ಮಾಡಲಾಗಿದೆ. </p><p>ಮಂಗಳೂರಿನ ರಂಗಕರ್ಮಿ ಶಶಿರಾಜ ಕಾವೂರು ಅವರನ್ನು ಶ್ರೀಪತಿ ಮಂಜನಬೈಲು ದತ್ತಿನಿಧಿಯ ‘ರಂಗ ಸನ್ಮಾನ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಸರೋಜಿನಿ ನಾಗಪ್ಪಯ್ಯ ಈಶ್ವರಮಂಗಲ ದತ್ತಿನಿಧಿಯ ‘ಯಕ್ಷಗಾನ ಸಾಹಿತ್ಯ ಸಂಶೋಧನ ಪ್ರಶಸ್ತಿ’ಗೆ ಶಿರಸಿಯ ಸಾಹಿತಿ ಅಶೋಕ ಹಾಸ್ಯಗಾರ ಆಯ್ಕೆಯಾಗಿದ್ದಾರೆ. </p><p>ಸಂಘದ ವಾರ್ಷಿಕ ಗೌರವ ಪ್ರಶಸ್ತಿಗೆ ಹುಲಿಮನೆ ಜಯರಾಮ ಹೆಗಡೆ ಮಿಜಾರು ಭಾಜನರಾಗಿದ್ದಾರೆ.</p><p>ದತ್ತಿ ಪ್ರಶಸ್ತಿಗಳು ತಲಾ ₹ 10 ಸಾವಿರ ನಗದು, ವಾರ್ಷಿಕ ಪ್ರಶಸ್ತಿ ₹ 5 ಸಾವಿರ ನಗದು ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಡಿ.28ರಂದು ಕಾಂತಾವರ ಕನ್ನಡ ಭವನದಲ್ಲಿ ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ನಾ ಮೊಗಸಾಲೆ ಮತ್ತು ಪ್ರಧಾನ ಕಾರ್ಯದರ್ಶಿ ಸದಾನಂದ ನಾರಾವಿ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಕಾಂತಾವರ ಕನ್ನಡ ಸಂಘದ ವಾರ್ಷಿಕ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು ಮೊಗಸಾಲೆ ಪ್ರತಿಷ್ಠಾನ ನೀಡುವ ಸಾಹಿತ್ಯ ಪ್ರಶಸ್ತಿಗೆ ಕಾಸರಗೋಡಿನ ಕವಿ ರಾಧಾಕೃಷ್ಣ ಉಳಿಯತ್ತಡ್ಕ ಅವರನ್ನು ಆಯ್ಕೆ ಮಾಡಲಾಗಿದೆ. </p><p>ಮಂಗಳೂರಿನ ರಂಗಕರ್ಮಿ ಶಶಿರಾಜ ಕಾವೂರು ಅವರನ್ನು ಶ್ರೀಪತಿ ಮಂಜನಬೈಲು ದತ್ತಿನಿಧಿಯ ‘ರಂಗ ಸನ್ಮಾನ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಸರೋಜಿನಿ ನಾಗಪ್ಪಯ್ಯ ಈಶ್ವರಮಂಗಲ ದತ್ತಿನಿಧಿಯ ‘ಯಕ್ಷಗಾನ ಸಾಹಿತ್ಯ ಸಂಶೋಧನ ಪ್ರಶಸ್ತಿ’ಗೆ ಶಿರಸಿಯ ಸಾಹಿತಿ ಅಶೋಕ ಹಾಸ್ಯಗಾರ ಆಯ್ಕೆಯಾಗಿದ್ದಾರೆ. </p><p>ಸಂಘದ ವಾರ್ಷಿಕ ಗೌರವ ಪ್ರಶಸ್ತಿಗೆ ಹುಲಿಮನೆ ಜಯರಾಮ ಹೆಗಡೆ ಮಿಜಾರು ಭಾಜನರಾಗಿದ್ದಾರೆ.</p><p>ದತ್ತಿ ಪ್ರಶಸ್ತಿಗಳು ತಲಾ ₹ 10 ಸಾವಿರ ನಗದು, ವಾರ್ಷಿಕ ಪ್ರಶಸ್ತಿ ₹ 5 ಸಾವಿರ ನಗದು ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಡಿ.28ರಂದು ಕಾಂತಾವರ ಕನ್ನಡ ಭವನದಲ್ಲಿ ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ನಾ ಮೊಗಸಾಲೆ ಮತ್ತು ಪ್ರಧಾನ ಕಾರ್ಯದರ್ಶಿ ಸದಾನಂದ ನಾರಾವಿ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>