<p><strong>ಉಜಿರೆ</strong>: ಪರಿಶುದ್ಧ ಮನಸ್ಸಿನಿಂದ ದೇವರ ಭಕ್ತಿ, ಧ್ಯಾನ ಮಾಡಿ, ಧರ್ಮದ ಅನುಷ್ಠಾನದೊಂದಿಗೆ ಪರಸ್ಪರ ಪ್ರೀತಿ-ವಿಶ್ವಾಸದಿಂದ ಜೀವನ ನಡೆಸಿದಾಗ ಎಲ್ಲರಿಗೂ ಆರೋಗ್ಯ ಹಾಗೂ ನೆಮ್ಮದಿ ಸಿಗುತ್ತದೆ ಎಂದು ಧರ್ಮಸ್ಥಳ ಕನ್ಯಾಡಿಯ ರಾಮಕ್ಷೇತ್ರದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.</p>.<p>ಧರ್ಮಸ್ಥಳದ ಕನ್ಯಾಡಿಯಲ್ಲಿರುವ ರಾಮಕ್ಷೇತ್ರದ ಗುರುದೇವ ಮಠದಲ್ಲಿ ಬುಧವಾರ ಅವರು ರಾಮ ಮತ್ತು ಪರಿವಾರ ಮೂರ್ತಿಗಳು ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಪ್ರತಿಷ್ಠಾಪನೆ ಮಾಡಿ ಆಶೀರ್ವಚನ ನೀಡಿದರು.</p>.<p>‘ಶ್ರೀರಾಮನ ಮನಸ್ಸಿನಂತೆ ಎಲ್ಲರ ಮನದಲ್ಲಿಯೂ ಪಾವಿತ್ರ್ಯ ಇರುತ್ತದೆ. ನಾವು ಅದರ ಸದುಪಯೋಗ ಮಾಡಿ ಪ್ರೀತಿ-ವಿಶ್ವಾಸದಿಂದ ಸಾರ್ಥಕ ಜೀವನ ನಡೆಸಬೇಕು’ ಎಂದು ಅವರು ಸಲಹೆ ನೀಡಿದರು.</p>.<p>ಮಂಗಳೂರಿನ ಚಿತ್ತರಂಜನ್ ಗರೋಡಿ, ಶೈಲೇಶ್ ಕುಮಾರ್, ಭಾಸ್ಕರ ಧರ್ಮಸ್ಥಳ ಹಾಗೂ ಉಜಿರೆಯ ಡಾ. ಎಂ. ಎಂ. ದಯಾಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಜಿರೆ</strong>: ಪರಿಶುದ್ಧ ಮನಸ್ಸಿನಿಂದ ದೇವರ ಭಕ್ತಿ, ಧ್ಯಾನ ಮಾಡಿ, ಧರ್ಮದ ಅನುಷ್ಠಾನದೊಂದಿಗೆ ಪರಸ್ಪರ ಪ್ರೀತಿ-ವಿಶ್ವಾಸದಿಂದ ಜೀವನ ನಡೆಸಿದಾಗ ಎಲ್ಲರಿಗೂ ಆರೋಗ್ಯ ಹಾಗೂ ನೆಮ್ಮದಿ ಸಿಗುತ್ತದೆ ಎಂದು ಧರ್ಮಸ್ಥಳ ಕನ್ಯಾಡಿಯ ರಾಮಕ್ಷೇತ್ರದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.</p>.<p>ಧರ್ಮಸ್ಥಳದ ಕನ್ಯಾಡಿಯಲ್ಲಿರುವ ರಾಮಕ್ಷೇತ್ರದ ಗುರುದೇವ ಮಠದಲ್ಲಿ ಬುಧವಾರ ಅವರು ರಾಮ ಮತ್ತು ಪರಿವಾರ ಮೂರ್ತಿಗಳು ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಪ್ರತಿಷ್ಠಾಪನೆ ಮಾಡಿ ಆಶೀರ್ವಚನ ನೀಡಿದರು.</p>.<p>‘ಶ್ರೀರಾಮನ ಮನಸ್ಸಿನಂತೆ ಎಲ್ಲರ ಮನದಲ್ಲಿಯೂ ಪಾವಿತ್ರ್ಯ ಇರುತ್ತದೆ. ನಾವು ಅದರ ಸದುಪಯೋಗ ಮಾಡಿ ಪ್ರೀತಿ-ವಿಶ್ವಾಸದಿಂದ ಸಾರ್ಥಕ ಜೀವನ ನಡೆಸಬೇಕು’ ಎಂದು ಅವರು ಸಲಹೆ ನೀಡಿದರು.</p>.<p>ಮಂಗಳೂರಿನ ಚಿತ್ತರಂಜನ್ ಗರೋಡಿ, ಶೈಲೇಶ್ ಕುಮಾರ್, ಭಾಸ್ಕರ ಧರ್ಮಸ್ಥಳ ಹಾಗೂ ಉಜಿರೆಯ ಡಾ. ಎಂ. ಎಂ. ದಯಾಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>