ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ. ಹರೀಶ್ ಕುಮಾರ್ ಶಿಫಾರಸ್ಸಿನ ಮೇರೆಗೆ ಪ್ರತಿಯೊಂದು ವಿಧಾನಸಭಾ ಕ್ಷೇತ್ರಕ್ಕೂ ಉಸ್ತುವಾರಿಗಳನ್ನು ನೇಮಿಸಲಾಗಿದೆ. ಸುಳ್ಯ ಕ್ಷೇತ್ರಕ್ಕೆ ಶಕುಂತಳಾ ಶೆಟ್ಟಿ, ಪುತ್ತೂರಿಗೆ ಜೆ.ಆರ್. ಲೋಬೊ, ಬೆಳ್ತಂಗಡಿಗೆ ಶಶಿಧರ್ ಹೆಗ್ಡೆ, ಬಂಟ್ವಾಳಕ್ಕೆ ಬಿ.ಇಬ್ರಾಹಿಂ, ಮೂಡುಬಿದಿರೆಗೆ ಮಹಾಬಲ ಮಾರ್ಲ, ಮಂಗಳೂರು ಕ್ಷೇತ್ರಕ್ಕೆ ಕವಿತಾ ಸನಿಲ್, ಮಂಗಳೂರು ದಕ್ಷಿಣಕ್ಕೆ ಮೊಹಿಯುದ್ದೀನ್ ಬಾವ ಹಾಗೂ
ಮಂಗಳೂರು ಉತ್ತರಕ್ಕೆ ಐವನ್ ಡಿಸೋಜ ಅವರು ಉಸ್ತುವಾರಿಯಾಗಿ ನೇಮಕಗೊಂಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.