<p><strong>ಮಂಗಳೂರು:</strong> ಐದು ದಶಕಗಳಲ್ಲಿ ನಡೆದ 10ಕ್ಕೂ ಹೆಚ್ಚು ವಿಧಾನಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯ ಜಿದ್ದಾಜಿದ್ದಿಗೆ ಕಾರಣವಾಗಿರುವ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿಯೂ ಚುನಾವಣಾ ಕಣ ರಂಗೇರಿದೆ.</p>.<p>ಈ ಎರಡು ಪಕ್ಷಗಳ ಮುಖಂಡರು ಟಿಕೆಟ್ ಗಿಟ್ಟಿಸಿಕೊಳ್ಳುವುದಕ್ಕಾಗಿ ವಿವಿಧ ತಂತ್ರಗಳಿಗೆ ಮೊರೆಹೋಗಿದ್ದು ನಿರ್ದಿಷ್ಟವಾಗಿ ಇಂಥವರೇ ಅಭ್ಯರ್ಥಿ ಎಂದು ಬೊಟ್ಟು ಮಾಡಿ ತೋರಿಸುವಷ್ಟರ ಮಟ್ಟಿಗೆ ನಿರ್ಧಾರ ಆಗಿಲ್ಲ. ಜೆಡಿಎಸ್ ಮತ್ತು ಎಸ್ಡಿಪಿಐ ಕೂಡ ಇಲ್ಲಿ ಸ್ಪರ್ಧಿಸಲು ಆಕಾಂಕ್ಷೆ ಹೊಂದಿದೆ. ಆದರೆ ಆ ಪಕ್ಷಗಳಲ್ಲಿ ಟಿಕೆಟ್ ಆಕಾಂಕ್ಷಿಗಳ ಬಗ್ಗೆಯೇ ಸ್ಪಷ್ಟ ರೂಪ ಇಲ್ಲ.</p>.<p>ಹಿಂದಿನ ಚುನಾವಣೆಗಳಲ್ಲಿ ಎರಡು ಪಕ್ಷಗಳ ಜೊತೆಯಲ್ಲಿ ಆ ಪಕ್ಷಗಳನ್ನು ಪ್ರತಿನಿಧಿಸಿದವರೂ ಆಧಿಪತ್ಯ ಸ್ಥಾಪಿಸಿದ್ದರು. ಆದ್ದರಿಂದ ಹೊಸಮುಖಗಳಿಗೆ ಇಲ್ಲಿ ಅವಕಾಶ ಲಭಿಸಿದ್ದು ಕಡಿಮೆ. ಹಿಂದಿನ ಚುನಾವಣೆಗಳಲ್ಲಿ ಸ್ಪರ್ಧಿಸಿದವರೇ ಈ ಬಾರಿಯೂ ಕಾಂಗ್ರೆಸ್ ಮತ್ತು ಬಿಜೆಪಿ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಕಾಂಗ್ರೆಸ್ ಟಿಕೆಟ್ಗಾಗಿ ಬೆಂಗಳೂರಿನ ರಕ್ಷಿತ್ ಶಿವರಾಮ್ ಅರ್ಜಿ ಸಲ್ಲಿಸಿರು<br />ವುದು ಸಂಚಲನ ಮೂಡಿಸಿದೆ.</p>.<p>ಕಾಂಗ್ರೆಸ್ನಿಂದ ವಸಂತ ಬಂಗೇರ ಮತ್ತು ಗಂಗಾಧರ ಗೌಡ ಕೂಡ ಟಿಕೆಟ್ ಆಕಾಂಕ್ಷಿಗಳು. ಇಬ್ಬರೂ ಈ ಹಿಂದೆ ಈ ಕ್ಷೇತ್ರವನ್ನು ಪ್ರತಿನಿಧಿಸಿದವರು. ಬಿಜೆಪಿ, ಹಾಲಿ ಶಾಸಕ ಹರೀಶ ಪೂಂಜಾ ಅವರೇ ಅಭ್ಯರ್ಥಿ ಎಂದು ಬಾಹ್ಯವಾಗಿ ಹೇಳಿಕೊಳ್ಳುತ್ತಿದ್ದರೂ ಆಕಾಂಕ್ಷಿಗಳ ಒಳ ಹೊಡೆತ ಆ ಪಕ್ಷದಲ್ಲೂ ಇದೆ. ಪಕ್ಷದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಹಾಗೂ ಸಂಸ್ಕಾರ ಭಾರತಿ ತಾಲ್ಲೂಕು ಘಟಕದ ಅಧ್ಯಕ್ಷ ಸಂಪತ್ ಬಿ.ಸುವರ್ಣ ಅವರೂ ಪಕ್ಷದಿಂದ ಸ್ಪರ್ಧಿಸಲು ತುದಿಗಾಲಲ್ಲಿ ನಿಂತಿದ್ದಾರೆ ಎಂಬುದು ಪಕ್ಷದ ವಲಯದಲ್ಲಿ ಕೇಳಿಬರುತ್ತಿರುವ ಮಾತು.</p>.<p>ಹೀಗಾಗಿ ಹಲವು ಕ್ಷೇತ್ರಗಳಂತೆ ಇಲ್ಲಿಯೂ ಕಾಂಗ್ರೆಸ್ಗೆ ಟಿಕೆಟ್ ಹಂಚಿಕೆಯ ಟೆನ್ಶನ್ ಕಾಡುತ್ತಿದ್ದರೆ ಬಿಜೆಪಿಯಲ್ಲಿ ಅಭ್ಯರ್ಥಿ ಯಾರೆಂಬ ಗೊಂದಲ ಸ್ವಲ್ಪ ಮಟ್ಟಿಗೆ ಇದೆ. ಆದರೂ ಆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ನಿರಾಳರಾಗಿದ್ದಾರೆ.</p>.<p class="Subhead">ಜೆಡಿಎಸ್, ಎಸ್ಡಿಪಿಐ ನಡೆ ನಿಗೂಢ: ಹಿಂದಿನ ಚುನಾವಣೆಗಳಲ್ಲಿ ಆಗೊಮ್ಮೆ ಈಗೊಮ್ಮೆ ಮುನ್ನೆಲೆಗೆ ಬಂದಿದ್ದ ಜೆಡಿಎಸ್ ಈ ಬಾರಿ ಸ್ಪರ್ಧಿಸುತ್ತದೆಯೋ ಇಲ್ಲವೋ ಎಂಬುದು ಇನ್ನೂ ನಿರ್ಧಾರ ಆಗಲಿಲ್ಲ. ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಬಲ ಪ್ರದರ್ಶಿಸಿದ್ದ ಎಸ್ಡಿಪಿಐ ನಡೆಯೂ ನಿಗೂಢವಾಗಿಯೇ ಉಳಿದಿದೆ. ಹಿಂದೆ ಒಂದೆರಡು ಬಾರಿ ಸ್ಪರ್ಧಿಸಿದ್ದ ಸಿಪಿಎಂ ಈ ಬಾರಿ ಕಣದಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ಹೇಳಿದೆ.</p>.<p>‘ಹರೀಶ್ ಪೂಂಜ ಅವರು ತಮ್ಮ ಅವಧಿಯಲ್ಲಿ ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ಆದ್ದರಿಂದ ಅವರಿಗೇ ಟಿಕೆಟ್ ಸಿಗುವ ಸಾಧ್ಯತೆ ಹೆಚ್ಚು ಇದೆ. ಗ್ರಾಮ ಪಂಚಾಯಿತಿಗಳಲ್ಲಿ ಪಕ್ಷ ಬಲಿಷ್ಠವಾಗಿರುವುದರಿಂದ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಿದೆ’ ಎನ್ನುತ್ತಾರೆ, ಬಿಜೆಪಿ ಕ್ಷೇತ್ರ ಘಟಕದ ಅಧ್ಯಕ್ಷ ಜಯಂತ್ ಕೋಟ್ಯಾನ್.</p>.<p>ಪೂರಕ ಮಾಹಿತಿ: ಗಣೇಶ್ ಶಿರ್ಲಾಲು, ಬೆಳ್ತಂಗಡಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಐದು ದಶಕಗಳಲ್ಲಿ ನಡೆದ 10ಕ್ಕೂ ಹೆಚ್ಚು ವಿಧಾನಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯ ಜಿದ್ದಾಜಿದ್ದಿಗೆ ಕಾರಣವಾಗಿರುವ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿಯೂ ಚುನಾವಣಾ ಕಣ ರಂಗೇರಿದೆ.</p>.<p>ಈ ಎರಡು ಪಕ್ಷಗಳ ಮುಖಂಡರು ಟಿಕೆಟ್ ಗಿಟ್ಟಿಸಿಕೊಳ್ಳುವುದಕ್ಕಾಗಿ ವಿವಿಧ ತಂತ್ರಗಳಿಗೆ ಮೊರೆಹೋಗಿದ್ದು ನಿರ್ದಿಷ್ಟವಾಗಿ ಇಂಥವರೇ ಅಭ್ಯರ್ಥಿ ಎಂದು ಬೊಟ್ಟು ಮಾಡಿ ತೋರಿಸುವಷ್ಟರ ಮಟ್ಟಿಗೆ ನಿರ್ಧಾರ ಆಗಿಲ್ಲ. ಜೆಡಿಎಸ್ ಮತ್ತು ಎಸ್ಡಿಪಿಐ ಕೂಡ ಇಲ್ಲಿ ಸ್ಪರ್ಧಿಸಲು ಆಕಾಂಕ್ಷೆ ಹೊಂದಿದೆ. ಆದರೆ ಆ ಪಕ್ಷಗಳಲ್ಲಿ ಟಿಕೆಟ್ ಆಕಾಂಕ್ಷಿಗಳ ಬಗ್ಗೆಯೇ ಸ್ಪಷ್ಟ ರೂಪ ಇಲ್ಲ.</p>.<p>ಹಿಂದಿನ ಚುನಾವಣೆಗಳಲ್ಲಿ ಎರಡು ಪಕ್ಷಗಳ ಜೊತೆಯಲ್ಲಿ ಆ ಪಕ್ಷಗಳನ್ನು ಪ್ರತಿನಿಧಿಸಿದವರೂ ಆಧಿಪತ್ಯ ಸ್ಥಾಪಿಸಿದ್ದರು. ಆದ್ದರಿಂದ ಹೊಸಮುಖಗಳಿಗೆ ಇಲ್ಲಿ ಅವಕಾಶ ಲಭಿಸಿದ್ದು ಕಡಿಮೆ. ಹಿಂದಿನ ಚುನಾವಣೆಗಳಲ್ಲಿ ಸ್ಪರ್ಧಿಸಿದವರೇ ಈ ಬಾರಿಯೂ ಕಾಂಗ್ರೆಸ್ ಮತ್ತು ಬಿಜೆಪಿ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಕಾಂಗ್ರೆಸ್ ಟಿಕೆಟ್ಗಾಗಿ ಬೆಂಗಳೂರಿನ ರಕ್ಷಿತ್ ಶಿವರಾಮ್ ಅರ್ಜಿ ಸಲ್ಲಿಸಿರು<br />ವುದು ಸಂಚಲನ ಮೂಡಿಸಿದೆ.</p>.<p>ಕಾಂಗ್ರೆಸ್ನಿಂದ ವಸಂತ ಬಂಗೇರ ಮತ್ತು ಗಂಗಾಧರ ಗೌಡ ಕೂಡ ಟಿಕೆಟ್ ಆಕಾಂಕ್ಷಿಗಳು. ಇಬ್ಬರೂ ಈ ಹಿಂದೆ ಈ ಕ್ಷೇತ್ರವನ್ನು ಪ್ರತಿನಿಧಿಸಿದವರು. ಬಿಜೆಪಿ, ಹಾಲಿ ಶಾಸಕ ಹರೀಶ ಪೂಂಜಾ ಅವರೇ ಅಭ್ಯರ್ಥಿ ಎಂದು ಬಾಹ್ಯವಾಗಿ ಹೇಳಿಕೊಳ್ಳುತ್ತಿದ್ದರೂ ಆಕಾಂಕ್ಷಿಗಳ ಒಳ ಹೊಡೆತ ಆ ಪಕ್ಷದಲ್ಲೂ ಇದೆ. ಪಕ್ಷದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಹಾಗೂ ಸಂಸ್ಕಾರ ಭಾರತಿ ತಾಲ್ಲೂಕು ಘಟಕದ ಅಧ್ಯಕ್ಷ ಸಂಪತ್ ಬಿ.ಸುವರ್ಣ ಅವರೂ ಪಕ್ಷದಿಂದ ಸ್ಪರ್ಧಿಸಲು ತುದಿಗಾಲಲ್ಲಿ ನಿಂತಿದ್ದಾರೆ ಎಂಬುದು ಪಕ್ಷದ ವಲಯದಲ್ಲಿ ಕೇಳಿಬರುತ್ತಿರುವ ಮಾತು.</p>.<p>ಹೀಗಾಗಿ ಹಲವು ಕ್ಷೇತ್ರಗಳಂತೆ ಇಲ್ಲಿಯೂ ಕಾಂಗ್ರೆಸ್ಗೆ ಟಿಕೆಟ್ ಹಂಚಿಕೆಯ ಟೆನ್ಶನ್ ಕಾಡುತ್ತಿದ್ದರೆ ಬಿಜೆಪಿಯಲ್ಲಿ ಅಭ್ಯರ್ಥಿ ಯಾರೆಂಬ ಗೊಂದಲ ಸ್ವಲ್ಪ ಮಟ್ಟಿಗೆ ಇದೆ. ಆದರೂ ಆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ನಿರಾಳರಾಗಿದ್ದಾರೆ.</p>.<p class="Subhead">ಜೆಡಿಎಸ್, ಎಸ್ಡಿಪಿಐ ನಡೆ ನಿಗೂಢ: ಹಿಂದಿನ ಚುನಾವಣೆಗಳಲ್ಲಿ ಆಗೊಮ್ಮೆ ಈಗೊಮ್ಮೆ ಮುನ್ನೆಲೆಗೆ ಬಂದಿದ್ದ ಜೆಡಿಎಸ್ ಈ ಬಾರಿ ಸ್ಪರ್ಧಿಸುತ್ತದೆಯೋ ಇಲ್ಲವೋ ಎಂಬುದು ಇನ್ನೂ ನಿರ್ಧಾರ ಆಗಲಿಲ್ಲ. ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಬಲ ಪ್ರದರ್ಶಿಸಿದ್ದ ಎಸ್ಡಿಪಿಐ ನಡೆಯೂ ನಿಗೂಢವಾಗಿಯೇ ಉಳಿದಿದೆ. ಹಿಂದೆ ಒಂದೆರಡು ಬಾರಿ ಸ್ಪರ್ಧಿಸಿದ್ದ ಸಿಪಿಎಂ ಈ ಬಾರಿ ಕಣದಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ಹೇಳಿದೆ.</p>.<p>‘ಹರೀಶ್ ಪೂಂಜ ಅವರು ತಮ್ಮ ಅವಧಿಯಲ್ಲಿ ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ಆದ್ದರಿಂದ ಅವರಿಗೇ ಟಿಕೆಟ್ ಸಿಗುವ ಸಾಧ್ಯತೆ ಹೆಚ್ಚು ಇದೆ. ಗ್ರಾಮ ಪಂಚಾಯಿತಿಗಳಲ್ಲಿ ಪಕ್ಷ ಬಲಿಷ್ಠವಾಗಿರುವುದರಿಂದ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಿದೆ’ ಎನ್ನುತ್ತಾರೆ, ಬಿಜೆಪಿ ಕ್ಷೇತ್ರ ಘಟಕದ ಅಧ್ಯಕ್ಷ ಜಯಂತ್ ಕೋಟ್ಯಾನ್.</p>.<p>ಪೂರಕ ಮಾಹಿತಿ: ಗಣೇಶ್ ಶಿರ್ಲಾಲು, ಬೆಳ್ತಂಗಡಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>