ಕಲ್ಮಂಜೆ ಗುರುರಾಜ ಆಚಾರ್ಯ ಅವರು ಬೆಂಗಳೂರಿನಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದು, 30 ವರ್ಷಗಳ ಅನುಭವ ಹೊಂದಿದ್ದಾರೆ. ಬಿಕಾಂ, ಸಿಎಂಎ, ಸಿಎ ಪರೀಕ್ಷೆಯಲ್ಲಿ ಉನ್ನತ ರ್ಯಾಂಕ್ ಪಡೆದಿದ್ದಾರೆ. ಪ್ರಸ್ತುತ ‘ಕೆ.ಜಿ ಆಚಾರ್ಯ ಆಂಡ್ ಕೋ’ ಸಂಸ್ಥೆಯ ಮುಖ್ಯ ಪಾಲುದಾರರಾಗಿದ್ದಾರೆ ಹಾಗೂ ‘ಬೆಂಗಳೂರು- ಫೈನಾನ್ಶಿಯಲ್ ರಿಪೋರ್ಟಿಂಗ್ ರಿವ್ಯೂ ಗ್ರೂಪ್’ ಸದಸ್ಯರಾಗಿದ್ದಾರೆ. ಈ ಹಿಂದೆ ಸ್ಟೇಟ್ ಬ್ಯಾಂಕ್ ಆಫ್ ಮೈಸೂರ್ನ ಆಡಳಿತ ಮಂಡಳಿಯಲ್ಲಿ ನಿರ್ದೇಶಕರಾಗಿದ್ದರು ಮತ್ತು ಲೆಕ್ಕ ಪರಿಶೋಧನಾ ಸಮಿತಿಯ ಅಧ್ಯಕ್ಷರೂ ಆಗಿದ್ದರು. ರಿಸ್ಕ್ ಮ್ಯಾನೇಜ್ಮೆಂಟ್ ಕಮಿಟಿ, ನಾಮಿನೇಷನ್ ಕಮಿಟಿ, ರೆಮ್ಯುನರೇಷನ್ ಕಮಿಟಿ ಹಾಗೂ ಹೈವ್ಯಾಲ್ಯು ಫ್ರಾಡ್ ಕಮಿಟಿ ಗಳಲ್ಲಿ ಆಡಳಿತ ಮಂಡಳಿಯ ಸದಸ್ಯರಾಗಿದ್ದರು. ಐಸಿಎಐ ನವದೆಹಲಿಯ ತಜ್ಞರ ಸಲಹಾ ಸಮಿತಿಯ ಸದಸ್ಯರೂ ಆಗಿದ್ದರು ಎಂದು ಕರ್ಣಾಟಕ ಬ್ಯಾಂಕ್ನ ಮುಖ್ಯ ವ್ಯವಸ್ಥಾಪಕ ದೇವದಾಸ್ ಉಡುಪ ತಿಳಿಸಿದ್ದಾರೆ.