<p><strong>ಮಂಗಳೂರು</strong>: ಕರ್ಣಾಟಕ ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾಗಿ (ಎಂ.ಡಿ ಮತ್ತು ಸಿಇಒ) ರಾಘವೇಂದ್ರ ಎಸ್. ಭಟ್ ನೇಮಕಗೊಂಡಿದ್ದಾರೆ.</p>.<p>ಜುಲೈ 16ರಿಂದ ಮುಂದಿನ ಮೂರು ತಿಂಗಳ ಅವಧಿಗೆ ಅವರನ್ನು ನೇಮಿಸಲಾಗಿದೆ. ಬ್ಯಾಂಕ್ನ ಮುಂದಿನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಅಥವಾ ಸೆಬಿ ನಿಯಮ 2015ರ ಪ್ರಕಾರ ಅಧಿಕಾರ ವಹಿಸಿಕೊಂಡ ಮೂರು ತಿಂಗಳ ಒಳಗೆ ಈ ನೇಮಕಕ್ಕೆ ಷೇರುದಾರರ ಅನುಮೋದನೆ ಪಡೆಯಬೇಕಾಗುತ್ತದೆ.</p>.<p>ರಾಘವೇಂದ್ರ ಭಟ್ ಅವರು ಕರ್ಣಾಟಕ ಬ್ಯಾಂಕ್ನಲ್ಲಿ ಚೀಫ್ ಆಪರೇಟಿಂಗ್ ಆಫೀಸರ್ ಸೇರಿದಂತೆ ಪ್ರಮುಖ ಹುದ್ದೆಗಳಲ್ಲಿ ನಾಲ್ಕು ದಶಕ ಸೇವೆ ಸಲ್ಲಿಸಿದ್ದಾರೆ ಎಂದು ಬ್ಯಾಂಕ್ ಪ್ರಕಟಣೆ ತಿಳಿಸಿದೆ.</p>.<p>‘ರಾಘವೇಂದ್ರ ಭಟ್ ಅವರ ಅನುಭವ ಮತ್ತು ಪರಿಣತಿಯು ಬ್ಯಾಂಕ್ನ ನಿರಂತರ ಬೆಳವಣಿಗೆಗೆ ಸಹಕಾರಿಯಾಗಲಿದೆ’ ಎಂದು ಅಧ್ಯಕ್ಷ ಪಿ. ಪ್ರದೀಪ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.</p>.<p>‘ನಂಬಿಕೆ ಮತ್ತು ಸದ್ಭಾವನೆ ಬ್ಯಾಂಕ್ನ ತಳಹದಿಯಾಗಿದ್ದು, ಶತಮಾನ ಪೂರೈಸಿರುವ ಬ್ಯಾಂಕ್ನ ಅಡಿಪಾಯ ಇನ್ನಷ್ಟು ಗಟ್ಟಿಗೊಳಿಸಲು ಶ್ರಮಿಸುತ್ತೇನೆ’ ಎಂದು ರಾಘವೇಂದ್ರ ಭಟ್ ಹೇಳಿದ್ದಾರೆ.</p>.<p>ಕರ್ಣಾಟಕ ಬ್ಯಾಂಕ್ ಎಂ.ಡಿ ಮತ್ತು ಸಿಇಒ ಆಗಿದ್ದ ಶ್ರೀಕೃಷ್ಣನ್ ಹರಿಹರ ಶರ್ಮ ರಾಜೀನಾಮೆಯಿಂದ ಈ ಸ್ಥಾನ ತೆರವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಕರ್ಣಾಟಕ ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾಗಿ (ಎಂ.ಡಿ ಮತ್ತು ಸಿಇಒ) ರಾಘವೇಂದ್ರ ಎಸ್. ಭಟ್ ನೇಮಕಗೊಂಡಿದ್ದಾರೆ.</p>.<p>ಜುಲೈ 16ರಿಂದ ಮುಂದಿನ ಮೂರು ತಿಂಗಳ ಅವಧಿಗೆ ಅವರನ್ನು ನೇಮಿಸಲಾಗಿದೆ. ಬ್ಯಾಂಕ್ನ ಮುಂದಿನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಅಥವಾ ಸೆಬಿ ನಿಯಮ 2015ರ ಪ್ರಕಾರ ಅಧಿಕಾರ ವಹಿಸಿಕೊಂಡ ಮೂರು ತಿಂಗಳ ಒಳಗೆ ಈ ನೇಮಕಕ್ಕೆ ಷೇರುದಾರರ ಅನುಮೋದನೆ ಪಡೆಯಬೇಕಾಗುತ್ತದೆ.</p>.<p>ರಾಘವೇಂದ್ರ ಭಟ್ ಅವರು ಕರ್ಣಾಟಕ ಬ್ಯಾಂಕ್ನಲ್ಲಿ ಚೀಫ್ ಆಪರೇಟಿಂಗ್ ಆಫೀಸರ್ ಸೇರಿದಂತೆ ಪ್ರಮುಖ ಹುದ್ದೆಗಳಲ್ಲಿ ನಾಲ್ಕು ದಶಕ ಸೇವೆ ಸಲ್ಲಿಸಿದ್ದಾರೆ ಎಂದು ಬ್ಯಾಂಕ್ ಪ್ರಕಟಣೆ ತಿಳಿಸಿದೆ.</p>.<p>‘ರಾಘವೇಂದ್ರ ಭಟ್ ಅವರ ಅನುಭವ ಮತ್ತು ಪರಿಣತಿಯು ಬ್ಯಾಂಕ್ನ ನಿರಂತರ ಬೆಳವಣಿಗೆಗೆ ಸಹಕಾರಿಯಾಗಲಿದೆ’ ಎಂದು ಅಧ್ಯಕ್ಷ ಪಿ. ಪ್ರದೀಪ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.</p>.<p>‘ನಂಬಿಕೆ ಮತ್ತು ಸದ್ಭಾವನೆ ಬ್ಯಾಂಕ್ನ ತಳಹದಿಯಾಗಿದ್ದು, ಶತಮಾನ ಪೂರೈಸಿರುವ ಬ್ಯಾಂಕ್ನ ಅಡಿಪಾಯ ಇನ್ನಷ್ಟು ಗಟ್ಟಿಗೊಳಿಸಲು ಶ್ರಮಿಸುತ್ತೇನೆ’ ಎಂದು ರಾಘವೇಂದ್ರ ಭಟ್ ಹೇಳಿದ್ದಾರೆ.</p>.<p>ಕರ್ಣಾಟಕ ಬ್ಯಾಂಕ್ ಎಂ.ಡಿ ಮತ್ತು ಸಿಇಒ ಆಗಿದ್ದ ಶ್ರೀಕೃಷ್ಣನ್ ಹರಿಹರ ಶರ್ಮ ರಾಜೀನಾಮೆಯಿಂದ ಈ ಸ್ಥಾನ ತೆರವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>