<p><strong>ಮಂಗಳೂರು</strong>: ಕೃಷಿ ಬಂಡವಾಳ ವಿಸ್ತರಣೆ ಮೂಲಕ ಹೈನುಗಾರಿಕಾ ಉದ್ಯಮದಲ್ಲಿರುವ ಆರ್ಥಿಕ ಅವಕಾಶ ಬಳಸಿಕೊಳ್ಳಲು ಕರ್ಣಾಟಕ ಬ್ಯಾಂಕ್ ಮುಂದಾಗಿದೆ.</p>.<p>ಇದರ ಭಾಗವಾಗಿ ಫಿನ್ಟೆಕ್ ಸಂಸ್ಥೆಯಾದ ‘ಡಿಜಿವೃದ್ಧಿ (ಡಿಜಿವಿ)’ ಸಹಭಾಗಿತ್ವದಲ್ಲಿ ಹಣಕಾಸು ಸೇವೆ ಒದಗಿಸಲಿದೆ. ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಒಕ್ಕೂಟ (ಕೆಎಂಎಫ್) ಸಂಯೋಜಿತ ಗ್ರಾಮಾಂತರ ಹಾಗೂ ಇತರ ಹಾಲು ಉತ್ಪಾದಕ ಸಹಕಾರ ಸಂಘಗಳಲ್ಲಿ ಈ ಸೇವೆಗಳು ಲಭ್ಯವಾಗಲಿದ್ದು, ಪ್ರಸ್ತುತ ಚಾಮರಾಜನಗರ ಹಾಲು ಒಕ್ಕೂಟಕ್ಕೆ ಸೇರಿದ ಹಾಲಿನ ಸೊಸೈಟಿಗಳಿಗೆ ಈ ಸೌಲಭ್ಯ ಸಿಗುತ್ತಿದೆ. ಸದ್ಯದಲ್ಲಿ ಎಲ್ಲ ಹಾಲು ಒಕ್ಕೂಟಗಳಿಗೆ ಇದನ್ನು ವಿಸ್ತರಿಸಲಾಗುವುದು ಎಂದು ಬ್ಯಾಂಕ್ನ ಎಂಡಿ ಹಾಗೂ ಸಿಇಒ ಶ್ರಿಕೃಷ್ಣನ್ ಎಚ್ ಹೇಳಿದ್ದಾರೆ. </p>.<p>‘ಹೈನುಗಾರಿಕಾ ಕ್ಷೇತ್ರಕ್ಕೆ ಬ್ಯಾಂಕಿಂಗ್ ಉತ್ಪನ್ನಗಳ ಮೂಲಕ ಕರ್ಣಾಟಕ ಬ್ಯಾಂಕ್ ಇನ್ನಷ್ಟು ನೆರವಾಗಲಿದೆ’ ಎಂದು ಬ್ಯಾಂಕ್ನ ಕಾರ್ಯನಿರ್ವಾಹಕ ನಿರ್ದೇಶಕ ಶೇಖರ್ ರಾವ್ ಹೇಳಿದ್ದಾರೆ.</p>.<p>ಡಿಜಿವಿ ಪೇ ಉತ್ಪನ್ನವು ಹೈನುಗಾರರಿಗೆ ಪಾವತಿ ಸರಪಳಿಯನ್ನು ಸರಳಗೊಳಿಸುತ್ತದೆ ಮತ್ತು ಬ್ಯಾಂಕ್ ಖಾತೆ ತೆರೆಯುವುದು ಸೇರಿದಂತೆ ಬ್ಯಾಂಕಿಂಗ್ ಅಗತ್ಯಗಳಿಗೆ ನೆರವಾಗುತ್ತದೆ ಎಂದು ಡಿಜಿವೃದ್ಧಿ ಸಂಸ್ಥಾಪಕ ಮತ್ತು ಸಿಇಒ ರಾಘವನ್ ವೆಂಕಟೇಶನ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಕೃಷಿ ಬಂಡವಾಳ ವಿಸ್ತರಣೆ ಮೂಲಕ ಹೈನುಗಾರಿಕಾ ಉದ್ಯಮದಲ್ಲಿರುವ ಆರ್ಥಿಕ ಅವಕಾಶ ಬಳಸಿಕೊಳ್ಳಲು ಕರ್ಣಾಟಕ ಬ್ಯಾಂಕ್ ಮುಂದಾಗಿದೆ.</p>.<p>ಇದರ ಭಾಗವಾಗಿ ಫಿನ್ಟೆಕ್ ಸಂಸ್ಥೆಯಾದ ‘ಡಿಜಿವೃದ್ಧಿ (ಡಿಜಿವಿ)’ ಸಹಭಾಗಿತ್ವದಲ್ಲಿ ಹಣಕಾಸು ಸೇವೆ ಒದಗಿಸಲಿದೆ. ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಒಕ್ಕೂಟ (ಕೆಎಂಎಫ್) ಸಂಯೋಜಿತ ಗ್ರಾಮಾಂತರ ಹಾಗೂ ಇತರ ಹಾಲು ಉತ್ಪಾದಕ ಸಹಕಾರ ಸಂಘಗಳಲ್ಲಿ ಈ ಸೇವೆಗಳು ಲಭ್ಯವಾಗಲಿದ್ದು, ಪ್ರಸ್ತುತ ಚಾಮರಾಜನಗರ ಹಾಲು ಒಕ್ಕೂಟಕ್ಕೆ ಸೇರಿದ ಹಾಲಿನ ಸೊಸೈಟಿಗಳಿಗೆ ಈ ಸೌಲಭ್ಯ ಸಿಗುತ್ತಿದೆ. ಸದ್ಯದಲ್ಲಿ ಎಲ್ಲ ಹಾಲು ಒಕ್ಕೂಟಗಳಿಗೆ ಇದನ್ನು ವಿಸ್ತರಿಸಲಾಗುವುದು ಎಂದು ಬ್ಯಾಂಕ್ನ ಎಂಡಿ ಹಾಗೂ ಸಿಇಒ ಶ್ರಿಕೃಷ್ಣನ್ ಎಚ್ ಹೇಳಿದ್ದಾರೆ. </p>.<p>‘ಹೈನುಗಾರಿಕಾ ಕ್ಷೇತ್ರಕ್ಕೆ ಬ್ಯಾಂಕಿಂಗ್ ಉತ್ಪನ್ನಗಳ ಮೂಲಕ ಕರ್ಣಾಟಕ ಬ್ಯಾಂಕ್ ಇನ್ನಷ್ಟು ನೆರವಾಗಲಿದೆ’ ಎಂದು ಬ್ಯಾಂಕ್ನ ಕಾರ್ಯನಿರ್ವಾಹಕ ನಿರ್ದೇಶಕ ಶೇಖರ್ ರಾವ್ ಹೇಳಿದ್ದಾರೆ.</p>.<p>ಡಿಜಿವಿ ಪೇ ಉತ್ಪನ್ನವು ಹೈನುಗಾರರಿಗೆ ಪಾವತಿ ಸರಪಳಿಯನ್ನು ಸರಳಗೊಳಿಸುತ್ತದೆ ಮತ್ತು ಬ್ಯಾಂಕ್ ಖಾತೆ ತೆರೆಯುವುದು ಸೇರಿದಂತೆ ಬ್ಯಾಂಕಿಂಗ್ ಅಗತ್ಯಗಳಿಗೆ ನೆರವಾಗುತ್ತದೆ ಎಂದು ಡಿಜಿವೃದ್ಧಿ ಸಂಸ್ಥಾಪಕ ಮತ್ತು ಸಿಇಒ ರಾಘವನ್ ವೆಂಕಟೇಶನ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>