<p><strong>ಮಂಗಳೂರು</strong>: ಸಕಲ ವ್ಯವಸ್ಥೆ ಒಳಗೊಂಡ ಹಣಕಾಸು ಸೂಪರ್ ಮಾರ್ಕೆಟ್ ಆಗುವ ದಿಸೆಯಲ್ಲಿ ಹೆಜ್ಜೆಯಿಟ್ಟಿರುವ ಕರ್ಣಾಟಕ ಬ್ಯಾಂಕ್, ರಾಜ್ಯ ಸರ್ಕಾರದ ‘ಖಜಾನೆ–2’ ಇ –ರಸೀದಿಯನ್ನು ಇಂಟರ್ನೆಟ್ ಬ್ಯಾಂಕಿಂಗ್ ವೇದಿಕೆ ಮೂಲಕ ಪಾವತಿಸುವ ಸೌಲಭ್ಯ ಒದಗಿಸಲಿದೆ. ಜ.14ರಂದು ಇದಕ್ಕೆ ಅಧಿಕೃತ ಚಾಲನೆ ದೊರೆಯಲಿದೆ. </p>.<p>ಖಜಾನೆ–2, ಸಮಗ್ರ ಹಣಕಾಸು ನಿರ್ವಹಣೆ ವ್ಯವಸ್ಥೆ (ಐಎಫ್ಎಂಎಸ್) ಮೂಲಕ ರಾಜ್ಯ ಸರ್ಕಾರದ ಆದಾಯ ರಸೀದಿಗಳನ್ನು ಸಂಗ್ರಹಿಸಲು ಖಜಾನೆ ಇಲಾಖೆಯ ಅನುಮೋದನೆಯೊಂದಿಗೆ ಭಾರತೀಯ ರಿಸರ್ವ್ ಬ್ಯಾಂಕ್ನಿಂದ ಅಗತ್ಯ ಅಧಿಕಾರವನ್ನು ಕರ್ಣಾಟಕ ಬ್ಯಾಂಕ್ ಪಡೆದುಕೊಂಡಿದೆ. ಈ ವ್ಯವಸ್ಥೆ ಅಡಿಯಲ್ಲಿ ಇಂಟರ್ನೆಟ್ ಬ್ಯಾಂಕಿಂಗ್ ಮೂಲಕ ರಾಜ್ಯ ಸರ್ಕಾರದ ತೆರಿಗೆ ಮತ್ತು ಶುಲ್ಕವನ್ನು ಪಾವತಿಸಬಹುದು ಎಂದು ಬ್ಯಾಂಕ್ನ ಪ್ರಕಟಣೆ ತಿಳಿಸಿದೆ. </p>.<p>‘ಬ್ಯಾಂಕ್ನ ಸುರಕ್ಷಿತ ಮತ್ತು ಮೌಲ್ಯವರ್ಧಿತ ಡಿಜಿಟಲ್ ಸೇವೆಯ ಮುಂದುವರಿದ ಭಾಗ ಇದಾಗಿದ್ದು, ಪೇಪರ್ರಹಿತ ರಸೀದಿ ವ್ಯವಸ್ಥೆ, ವ್ಯವಹಾರದಲ್ಲಿ ಪಾರದರ್ಶಕತೆ, ದಕ್ಷತೆ ಹೆಚ್ಚಿಸಲು ಇದು ಸಹಕಾರಿಯಾಗಲಿದೆ’ ಎಂದು ಕರ್ಣಾಟಕ ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ರಾಘವೇಂದ್ರ ಎಸ್. ಭಟ್ ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಸಕಲ ವ್ಯವಸ್ಥೆ ಒಳಗೊಂಡ ಹಣಕಾಸು ಸೂಪರ್ ಮಾರ್ಕೆಟ್ ಆಗುವ ದಿಸೆಯಲ್ಲಿ ಹೆಜ್ಜೆಯಿಟ್ಟಿರುವ ಕರ್ಣಾಟಕ ಬ್ಯಾಂಕ್, ರಾಜ್ಯ ಸರ್ಕಾರದ ‘ಖಜಾನೆ–2’ ಇ –ರಸೀದಿಯನ್ನು ಇಂಟರ್ನೆಟ್ ಬ್ಯಾಂಕಿಂಗ್ ವೇದಿಕೆ ಮೂಲಕ ಪಾವತಿಸುವ ಸೌಲಭ್ಯ ಒದಗಿಸಲಿದೆ. ಜ.14ರಂದು ಇದಕ್ಕೆ ಅಧಿಕೃತ ಚಾಲನೆ ದೊರೆಯಲಿದೆ. </p>.<p>ಖಜಾನೆ–2, ಸಮಗ್ರ ಹಣಕಾಸು ನಿರ್ವಹಣೆ ವ್ಯವಸ್ಥೆ (ಐಎಫ್ಎಂಎಸ್) ಮೂಲಕ ರಾಜ್ಯ ಸರ್ಕಾರದ ಆದಾಯ ರಸೀದಿಗಳನ್ನು ಸಂಗ್ರಹಿಸಲು ಖಜಾನೆ ಇಲಾಖೆಯ ಅನುಮೋದನೆಯೊಂದಿಗೆ ಭಾರತೀಯ ರಿಸರ್ವ್ ಬ್ಯಾಂಕ್ನಿಂದ ಅಗತ್ಯ ಅಧಿಕಾರವನ್ನು ಕರ್ಣಾಟಕ ಬ್ಯಾಂಕ್ ಪಡೆದುಕೊಂಡಿದೆ. ಈ ವ್ಯವಸ್ಥೆ ಅಡಿಯಲ್ಲಿ ಇಂಟರ್ನೆಟ್ ಬ್ಯಾಂಕಿಂಗ್ ಮೂಲಕ ರಾಜ್ಯ ಸರ್ಕಾರದ ತೆರಿಗೆ ಮತ್ತು ಶುಲ್ಕವನ್ನು ಪಾವತಿಸಬಹುದು ಎಂದು ಬ್ಯಾಂಕ್ನ ಪ್ರಕಟಣೆ ತಿಳಿಸಿದೆ. </p>.<p>‘ಬ್ಯಾಂಕ್ನ ಸುರಕ್ಷಿತ ಮತ್ತು ಮೌಲ್ಯವರ್ಧಿತ ಡಿಜಿಟಲ್ ಸೇವೆಯ ಮುಂದುವರಿದ ಭಾಗ ಇದಾಗಿದ್ದು, ಪೇಪರ್ರಹಿತ ರಸೀದಿ ವ್ಯವಸ್ಥೆ, ವ್ಯವಹಾರದಲ್ಲಿ ಪಾರದರ್ಶಕತೆ, ದಕ್ಷತೆ ಹೆಚ್ಚಿಸಲು ಇದು ಸಹಕಾರಿಯಾಗಲಿದೆ’ ಎಂದು ಕರ್ಣಾಟಕ ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ರಾಘವೇಂದ್ರ ಎಸ್. ಭಟ್ ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>