<p>ಮಂಗಳೂರು: ಕರ್ನಾಟಕದಾದ್ಯಂತ ಇರುವ ನೋಂದಾಯಿತ ತಂಬಾಕು ಬೆಳೆಗಾರರಿಗೆ ಆರ್ಥಿಕ ನೆರವು ಒದಗಿಸುವುದಕ್ಕೆ ಸಂಬಂಧಿಸಿದಂತೆ ಕರ್ಣಾಟಕ ಬ್ಯಾಂಕ್, ಕೇಂದ್ರ ಸರ್ಕಾರದ ತಂಬಾಕು ಮಂಡಳಿಯ ಜೊತೆ ಪಾಲುಗಾರಿಕೆ ಒಪ್ಪಂದ ಮಾಡಿಕೊಂಡಿದೆ.</p>.<p>ಒಪ್ಪಂದದ ಪ್ರಕಾರ ತಂಬಾಕು ಮಂಡಳಿಯಲ್ಲಿ ನೋಂದಣಿ ಮಾಡಿ ಕೊಂಡಿರುವ ತಂಬಾಕು ಬೆಳೆಗಾರರ ಅಗತ್ಯಕ್ಕೆ ಅನುಗುಣವಾಗಿ ಬ್ಯಾಂಕ್ ವಿಶೇಷ ಸಾಲ ಯೋಜನೆ ರೂಪಿಸಿ, ಆರ್ಥಿಕ ನೆರವು ಒದಗಿಸಲಿದೆ.</p>.<p>ಬ್ಯಾಂಕ್ನ ಆಡಳಿತ ನಿರ್ದೇಶಕ ಮತ್ತು ಸಿಇಒ ರಾಘವೇಂದ್ರ ಎಸ್. ಭಟ್ ಅವರು ತಂಬಾಕು ಮಂಡಳಿಯ ನಿರ್ದೇಶಕ (ಹರಾಜು) ಶ್ರೀನಿವಾಸ ಬಿ.ಸಿ. ಅವರ ಸಮ್ಮುಖದಲ್ಲಿ ಹೊಸ ಯೋಜನೆಗೆ ಚಾಲನೆ ನೀಡಿದರು.</p>.<p>ಬಳಿಕ ಮಾತನಾಡಿದ ರಾಘವೇಂದ್ರ ಭಟ್, ‘ಅಗತ್ಯಕ್ಕೆ ಅನುಗುಣವಾದ ಆರ್ಥಿಕ ನೆರವು ಯೋಜನೆಗಳನ್ನು ರೂಪಿಸುವ ಮೂಲಕ ದೇಶದ ರೈತ ಸಮು ದಾಯವನ್ನು ಬಲಪಡಿಸಲು ಕರ್ಣಾಟಕ ಬ್ಯಾಂಕ್ ಬದ್ಧವಾಗಿದೆ. ತಂಬಾಕು ಮಂಡಳಿ ಜೊತೆಗಿನ ಈ ಒಪ್ಪಂದವು ಬೆಳೆಗಾರರಿಗೆ ಸಕಾಲದಲ್ಲಿ ಆರ್ಥಿಕ ನೆರವು ಹಾಗೂ ಬ್ಯಾಂಕಿಂಗ್ ಸೌಲಭ್ಯ ಪಡೆಯಲು ನೆರವಾಗಲಿದೆ’ ಎಂದರು.</p>.<p>‘ತಂಬಾಕು ಬೆಳೆಗಾರರಿಗೆ ಆರ್ಥಿಕ ನೆರವು ಒದಗಿಸುವ ನಿಟ್ಟಿನಲ್ಲಿ ಈ ಒಪ್ಪಂದವು ಒಂದು ಮಹತ್ವದ ಹೆಜ್ಜೆ. ಸಾಂಸ್ಥಿಕ ಬೆಂಬಲಕ್ಕೆ ಬೆಳೆಗಾರರ ಅಗತ್ಯ ಮನಗಂಡು ಬ್ಯಾಂಕ್ ರೂಪಿಸಿದ ಆರ್ಥಿಕ ಯೋಜನೆಯನ್ನು ಜೋಡಿಸುವ ಮೂಲಕ ರೈತರ ಅಗತ್ಯಗಳನ್ನು ಪರಿಣಾಮಕಾರಿಯಾಗಿ ಪೂರೈಸಲು ಸಾಧ್ಯವಾಗಲಿದೆ’ ಎಂದು ಶ್ರೀನಿವಾಸ ಬಿ.ಸಿ. ಹೇಳಿದರು.</p>.<p>ಕರ್ಣಾಟಕ ಬ್ಯಾಂಕ್, ತಂಬಾಕು ಮಂಡಳಿಯ ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-29-1174585182</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಗಳೂರು: ಕರ್ನಾಟಕದಾದ್ಯಂತ ಇರುವ ನೋಂದಾಯಿತ ತಂಬಾಕು ಬೆಳೆಗಾರರಿಗೆ ಆರ್ಥಿಕ ನೆರವು ಒದಗಿಸುವುದಕ್ಕೆ ಸಂಬಂಧಿಸಿದಂತೆ ಕರ್ಣಾಟಕ ಬ್ಯಾಂಕ್, ಕೇಂದ್ರ ಸರ್ಕಾರದ ತಂಬಾಕು ಮಂಡಳಿಯ ಜೊತೆ ಪಾಲುಗಾರಿಕೆ ಒಪ್ಪಂದ ಮಾಡಿಕೊಂಡಿದೆ.</p>.<p>ಒಪ್ಪಂದದ ಪ್ರಕಾರ ತಂಬಾಕು ಮಂಡಳಿಯಲ್ಲಿ ನೋಂದಣಿ ಮಾಡಿ ಕೊಂಡಿರುವ ತಂಬಾಕು ಬೆಳೆಗಾರರ ಅಗತ್ಯಕ್ಕೆ ಅನುಗುಣವಾಗಿ ಬ್ಯಾಂಕ್ ವಿಶೇಷ ಸಾಲ ಯೋಜನೆ ರೂಪಿಸಿ, ಆರ್ಥಿಕ ನೆರವು ಒದಗಿಸಲಿದೆ.</p>.<p>ಬ್ಯಾಂಕ್ನ ಆಡಳಿತ ನಿರ್ದೇಶಕ ಮತ್ತು ಸಿಇಒ ರಾಘವೇಂದ್ರ ಎಸ್. ಭಟ್ ಅವರು ತಂಬಾಕು ಮಂಡಳಿಯ ನಿರ್ದೇಶಕ (ಹರಾಜು) ಶ್ರೀನಿವಾಸ ಬಿ.ಸಿ. ಅವರ ಸಮ್ಮುಖದಲ್ಲಿ ಹೊಸ ಯೋಜನೆಗೆ ಚಾಲನೆ ನೀಡಿದರು.</p>.<p>ಬಳಿಕ ಮಾತನಾಡಿದ ರಾಘವೇಂದ್ರ ಭಟ್, ‘ಅಗತ್ಯಕ್ಕೆ ಅನುಗುಣವಾದ ಆರ್ಥಿಕ ನೆರವು ಯೋಜನೆಗಳನ್ನು ರೂಪಿಸುವ ಮೂಲಕ ದೇಶದ ರೈತ ಸಮು ದಾಯವನ್ನು ಬಲಪಡಿಸಲು ಕರ್ಣಾಟಕ ಬ್ಯಾಂಕ್ ಬದ್ಧವಾಗಿದೆ. ತಂಬಾಕು ಮಂಡಳಿ ಜೊತೆಗಿನ ಈ ಒಪ್ಪಂದವು ಬೆಳೆಗಾರರಿಗೆ ಸಕಾಲದಲ್ಲಿ ಆರ್ಥಿಕ ನೆರವು ಹಾಗೂ ಬ್ಯಾಂಕಿಂಗ್ ಸೌಲಭ್ಯ ಪಡೆಯಲು ನೆರವಾಗಲಿದೆ’ ಎಂದರು.</p>.<p>‘ತಂಬಾಕು ಬೆಳೆಗಾರರಿಗೆ ಆರ್ಥಿಕ ನೆರವು ಒದಗಿಸುವ ನಿಟ್ಟಿನಲ್ಲಿ ಈ ಒಪ್ಪಂದವು ಒಂದು ಮಹತ್ವದ ಹೆಜ್ಜೆ. ಸಾಂಸ್ಥಿಕ ಬೆಂಬಲಕ್ಕೆ ಬೆಳೆಗಾರರ ಅಗತ್ಯ ಮನಗಂಡು ಬ್ಯಾಂಕ್ ರೂಪಿಸಿದ ಆರ್ಥಿಕ ಯೋಜನೆಯನ್ನು ಜೋಡಿಸುವ ಮೂಲಕ ರೈತರ ಅಗತ್ಯಗಳನ್ನು ಪರಿಣಾಮಕಾರಿಯಾಗಿ ಪೂರೈಸಲು ಸಾಧ್ಯವಾಗಲಿದೆ’ ಎಂದು ಶ್ರೀನಿವಾಸ ಬಿ.ಸಿ. ಹೇಳಿದರು.</p>.<p>ಕರ್ಣಾಟಕ ಬ್ಯಾಂಕ್, ತಂಬಾಕು ಮಂಡಳಿಯ ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-29-1174585182</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>