ಮಂಗಳೂರು: ಕರ್ನಾಟಕ ಬಂದ್ ಗೆ ದಕ್ಷಿಣ ಕನ್ನಡದಲ್ಲಿ ನೀರಸ ಪ್ರತಿಕ್ರಿಯೆ ದೊರೆತಿದ್ದು, ಎಂದಿನಂತೆ ಖಾಸಗಿ ಬಸ್ಗಳುಮತ್ತು ಕೆಎಸ್ಆರ್ಟಿಸಿ ಬಸ್ಗಳು, ಆಟೋಗಳು ರಸ್ತೆಗಿಳಿದಿವೆ. ಬಂದರು ಪ್ರದೇಶದಲ್ಲಿ ವ್ಯಾಪಾರ-ವಹಿವಾಟುಗಳು ಆರಂಭವಾಗಿವೆ.
ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಬಿಗಿ ಪೊಲೀಸ್ಬಂದೋಬಸ್ತ್ ಮಾಡಲಾಗಿದ್ದು, ನಗರದಾದ್ಯಂತ 300 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.
6 ಕೆಎಸ್ಆರ್ಪಿ, 8 ಡಿಎಆರ್ ತುಕಡಿಗಳು ಮತ್ತು 50 ಹೋಂ ಗಾರ್ಡ್ ಗಳನ್ನು ನಿಯೋಜನೆ ಮಾಡಿದ್ದು, ಬೆಳಿಗ್ಗೆಯಿಂದಲೇ ಪೊಲೀಸ್ ಅಧಿಕಾರಿಗಳು ರೌಂಡ್ಸ್ ನಲ್ಲಿದ್ದಾರೆ.
ಬಲವಂತವಾಗಿ ಬಂದ್ ನಡೆಸಲು ಮುಂದಾದವರಿಗೆ ಮತ್ತು ಕೋವಿಡ್ 19 ನಿಯಮಾವಳಿ ಉಲ್ಲಂಘಿಸಿದವರಿಗೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಮಂಗಳೂರಿನಲ್ಲಿ ಕೇವಲ ಪ್ರತಿಭಟನೆ ಮಾತ್ರ ನಡೆಯಲಿದೆ. ನಗರದ ಮಿನಿ ವಿಧಾನಸೌಧದ ಎದುರು ರೈತಪರ ಸಂಘಟನೆಗಳು, ಡಿವೈಎಫ್ಐ ,ಸಿಪಿಐ, ಸಿಪಿಐಎಂ, ಕಾಂಗ್ರೆಸ್, ಜೆಡಿಎಸ್, ಸಿಐಟಿಯು, ಎಐಟಿಯುಸಿ, ಡಿ ಎಸ್ ಎಸ್ ಸಂಘಟನೆಗಳು ಪ್ರತಿಭಟನೆ ನಡೆಸಲಿವೆ.