<p><strong>ಮಂಗಳೂರು: </strong>ಖಾತೆ ಹಂಚಿಕೆ ವಿಷಯದಲ್ಲಿ ಅತೃಪ್ತರಾಗಿರುವ ಆನಂದ್ ಸಿಂಗ್ ಅವರು ತಿಳಿಸಿರುವ ಬೇಡಿಕೆಗಳನ್ನು ಪಕ್ಷದ ದೆಹಲಿ ವರಿಷ್ಠರಿಗೆ ತಲುಪಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.<br /><br />ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಯಚೂರು ಜಿಲ್ಲೆದೇವದುರ್ಗ ಕ್ಷೇತ್ರದ ಶಾಸಕ ಶಿವನಗೌಡ ನಾಯಕ, ಯಾದಗಿರಿ ಸುರಪುರದ ರಾಜುಗೌಡ ಸೇರಿದಂತೆ ಅತೃಪ್ತರು ಎಂದು ಬಿಂಬಿತರಾದವರ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯೆ ನೀಡಿದರು.</p>.<p>‘ಆನಂದ್ ಸಿಂಗ್ ಕೆಲವು ವಿಷಯಗಳನ್ನು ತಿಳಿಸಿದ್ದಾರೆ. ಅದನ್ನು ಪಕ್ಷದ ವರಿಷ್ಠರಿಗೆ ತಿಳಿಸುತ್ತೇನೆ’ ಎಂದರು.</p>.<p><strong>ಹುಕ್ಕಾ ಬಾರ್: </strong>ಕಾಂಗ್ರೆಸ್ ಕಚೇರಿಗಳನ್ನು ನೆಹರೂ ಹುಕ್ಕಾಬಾರ್ ಎಂದು ಬದಲಿಸಿ ಎಂಬುದಾಗಿ ಬಿಜೆಪಿ ಶಾಸಕ ಸಿ.ಟಿ. ರವಿ ಹೇಳಿಕೆ ಬಗ್ಗೆ, ಅದು ಅವರ ಅಭಿಪ್ರಾಯ, ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಬಗ್ಗೆಯೂ ರವಿ ಅಭಿಪ್ರಾಯ ಹೇಳಿದ್ದಾರೆ, ಸರ್ಕಾರದ ನಿರ್ಧಾರ ನಾವು ತೀರ್ಮಾನಿಸುತ್ತೇವೆ ಎಂದರು.</p>.<p><strong>ಸಾರ್ವಜನಿಕ ಗೌರವ ವಂದನೆ ಬೇಡ: </strong>ಪೊಲೀಸರು ವಿಮಾನ ನಿಲ್ದಾಣ ಮುಂತಾದ ಸಾರ್ವಜನಿಕ ಜಾಗಗಳಲ್ಲಿ ಮುಖ್ಯಮಂತ್ರಿ, ವಿಶಿಷ್ಟ ವ್ಯಕ್ತಿಗಳಿಗೆ ಗೌರವ ವಂದನೆ (ಗಾರ್ಡ್ ಆಫ್ ಆನರ್) ಸಲ್ಲಿಸುವುದು ಬೇಡ. ಪೊಲೀಸ್ ಇಲಾಖೆ ಕಾರ್ಯಕ್ರಮಗಳಲ್ಲಷ್ಟೇ ಸಾಕು ಎಂದು ತಿಳಿಸಿದ್ದೇನೆ. ಈ ಬಗ್ಗೆ ಶೀಘ್ರ ಸರ್ಕಾರಿ ಆದೇಶ ಆಗಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.</p>.<p><strong>ಇದನ್ನೂ ಓದಿ... <a href="https://www.prajavani.net/karnataka-news/indira-canteens-ct-ravi-indira-gandhi-jawaharlal-nehru-congress-bjp-politics-857113.html" target="_blank">ದೇಶಕ್ಕೆ ನೆಹರೂ, ಇಂದಿರಾ ಗಾಂಧಿ ಮಾತ್ರ ಕೊಡುಗೆ ಕೊಟ್ಟಿದ್ದಾರೆಯೇ?: ಸಿ.ಟಿ.ರವಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong>ಖಾತೆ ಹಂಚಿಕೆ ವಿಷಯದಲ್ಲಿ ಅತೃಪ್ತರಾಗಿರುವ ಆನಂದ್ ಸಿಂಗ್ ಅವರು ತಿಳಿಸಿರುವ ಬೇಡಿಕೆಗಳನ್ನು ಪಕ್ಷದ ದೆಹಲಿ ವರಿಷ್ಠರಿಗೆ ತಲುಪಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.<br /><br />ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಯಚೂರು ಜಿಲ್ಲೆದೇವದುರ್ಗ ಕ್ಷೇತ್ರದ ಶಾಸಕ ಶಿವನಗೌಡ ನಾಯಕ, ಯಾದಗಿರಿ ಸುರಪುರದ ರಾಜುಗೌಡ ಸೇರಿದಂತೆ ಅತೃಪ್ತರು ಎಂದು ಬಿಂಬಿತರಾದವರ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯೆ ನೀಡಿದರು.</p>.<p>‘ಆನಂದ್ ಸಿಂಗ್ ಕೆಲವು ವಿಷಯಗಳನ್ನು ತಿಳಿಸಿದ್ದಾರೆ. ಅದನ್ನು ಪಕ್ಷದ ವರಿಷ್ಠರಿಗೆ ತಿಳಿಸುತ್ತೇನೆ’ ಎಂದರು.</p>.<p><strong>ಹುಕ್ಕಾ ಬಾರ್: </strong>ಕಾಂಗ್ರೆಸ್ ಕಚೇರಿಗಳನ್ನು ನೆಹರೂ ಹುಕ್ಕಾಬಾರ್ ಎಂದು ಬದಲಿಸಿ ಎಂಬುದಾಗಿ ಬಿಜೆಪಿ ಶಾಸಕ ಸಿ.ಟಿ. ರವಿ ಹೇಳಿಕೆ ಬಗ್ಗೆ, ಅದು ಅವರ ಅಭಿಪ್ರಾಯ, ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಬಗ್ಗೆಯೂ ರವಿ ಅಭಿಪ್ರಾಯ ಹೇಳಿದ್ದಾರೆ, ಸರ್ಕಾರದ ನಿರ್ಧಾರ ನಾವು ತೀರ್ಮಾನಿಸುತ್ತೇವೆ ಎಂದರು.</p>.<p><strong>ಸಾರ್ವಜನಿಕ ಗೌರವ ವಂದನೆ ಬೇಡ: </strong>ಪೊಲೀಸರು ವಿಮಾನ ನಿಲ್ದಾಣ ಮುಂತಾದ ಸಾರ್ವಜನಿಕ ಜಾಗಗಳಲ್ಲಿ ಮುಖ್ಯಮಂತ್ರಿ, ವಿಶಿಷ್ಟ ವ್ಯಕ್ತಿಗಳಿಗೆ ಗೌರವ ವಂದನೆ (ಗಾರ್ಡ್ ಆಫ್ ಆನರ್) ಸಲ್ಲಿಸುವುದು ಬೇಡ. ಪೊಲೀಸ್ ಇಲಾಖೆ ಕಾರ್ಯಕ್ರಮಗಳಲ್ಲಷ್ಟೇ ಸಾಕು ಎಂದು ತಿಳಿಸಿದ್ದೇನೆ. ಈ ಬಗ್ಗೆ ಶೀಘ್ರ ಸರ್ಕಾರಿ ಆದೇಶ ಆಗಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.</p>.<p><strong>ಇದನ್ನೂ ಓದಿ... <a href="https://www.prajavani.net/karnataka-news/indira-canteens-ct-ravi-indira-gandhi-jawaharlal-nehru-congress-bjp-politics-857113.html" target="_blank">ದೇಶಕ್ಕೆ ನೆಹರೂ, ಇಂದಿರಾ ಗಾಂಧಿ ಮಾತ್ರ ಕೊಡುಗೆ ಕೊಟ್ಟಿದ್ದಾರೆಯೇ?: ಸಿ.ಟಿ.ರವಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>