ತಾ.ಪಂ ರದ್ದು ಪಡಿಸಲು ಹೊರಟಿರುವ ಸರ್ಕಾರ ಹಾಗೂ ಸಚಿವರ ಇಂತಹ ಗೊಂದಲದ ಹೇಳಿಕೆಗಳಿಂದ ಜನರನ್ನು ದಾರಿ ತಪ್ಪಿಸುವ ಕೆಲಸ ಕೈಬಿಡಬೇಕು. ಯಾವ ಕಾರಣದಿಂದ ರದ್ದು ಮಾಡ್ತಾ ಇದ್ದೀರಿ ಎಂಬುದನ್ನು ಜನರಿಗೆ ತಿಳಿಸಿ. 73ನೇ ತಿದ್ದುಪಡಿಯಂತೆ ಮೂರು ಹಂತಗಳಲ್ಲಿ ಅಧಿಕಾರ ವಿಕೇಂದ್ರೀಕರಣ ಆಗಬೇಕು ಎಂಬುದು ಸಂವಿಧಾನದ ಆಶಯವಾಗಿದೆ. ತಾಪಂ ರದ್ದು ಪಡಿಸಿ ಎಲ್ಲ ಕೆಲಸವನ್ನು ಶಾಸಕರೇ ಮಾಡಬೇಕೆ?. ಇದರಿಂದಾಗಿ ಅಭಿವೃದ್ಧಿಗೆ ಹಿನ್ನಡೆ ಆಗುತ್ತದೆ. ಕೂಡಲೇ ಇಂತಹ ಯೋಚನೆ ಕೈಬಿಡಬೇಕು ಎಂದು ಖಾದರ್ ಒತ್ತಾಯ ಮಾಡಿದರು.