‘ಶಾಫಿ ಬೆಳ್ಳಾರೆ ಅವರು ಎಸ್ಡಿಪಿಐ ರಾಜ್ಯ ಘಟಕದ ಕಾರ್ಯದರ್ಶಿಯಾಗಿದ್ದಾರೆ. ಅವರೇ ಪುತ್ತೂರು ಕ್ಷೇತ್ರದ ಅಭ್ಯರ್ಥಿಯಾಗಲಿ ಎಂದು ಆರು ತಿಂಗಳ ಹಿಂದೆಯೇ ಕ್ಷೇತ್ರ ಸಮಿತಿ ನಿರ್ಧಾರ ಕೈಗೊಂಡಿತ್ತು. ಆ ಬಳಿಕ ಅವರನ್ನು, ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಬಂಧಿಸಲಾಯಿತು. ಹಿಂದಿನ ತೀರ್ಮಾನದಂತೆ ಅವರನ್ನೇ ಅಭ್ಯರ್ಥಿಯಾಗಿಸಲು ನಿರ್ಧರಿಸಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ. ಫೈಜಿ ಅಧಿಕೃತವಾಗಿ ಘೋಷಿಸಲಿದ್ದಾರೆ‘ ಎಂದು ಪಕ್ಷದ ಪುತ್ತೂರು ಕ್ಷೇತ್ರ ಸಮಿತಿ ಅಧ್ಯಕ್ಷ ಇಬ್ರಾಹಿಂ ಸಾಗರ್ ತಿಳಿಸಿದ್ದಾರೆ.