ಜಂಟಿ ಸರ್ವೆ: ಅರಣ್ಯ ಮತ್ತು ಕಂದಾಯ ಜಮೀನು ಗುರುತಿಸಲು ಉಭಯ ಇಲಾಖೆಗಳಿಂದ ಜಂಟಿ ಸರ್ವೆ ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಕೋಲಾರದಲ್ಲಿ ನಡೆಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಮಂಗಳವಾರದಿಂದ ಸರ್ವೆ ಆರಂಭವಾಗಿದೆ. ಕಂದಾಯ ಜಮೀನನ್ನು ಅರಣ್ಯ ಇಲಾಖೆ ಒತ್ತುವರಿ ಮಾಡಿಕೊಂಡಿದೆ ಎಂಬ ದೂರುಗಳಿಗೆ ಇದರಿಂದ ಉತ್ತರ ಸಿಗಲಿದೆ. ಜಂಟಿ ಸರ್ವೆ ಪೂರ್ಣಗೊಂಡ ನಂತರ ಮೀಸಲು ಅರಣ್ಯದಲ್ಲಿಯ ಒತ್ತುವರಿಯನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಲಾಗುವುದು ಎಂದರು.