<p><strong>ಮಂಗಳೂರು:</strong> ರಾಜ್ಯ ಸರ್ಕಾರವು ಏಷಿಯನ್ ಡೆವಲಪ್ಮೆಂಟ್ ಬ್ಯಾಂಕ್ (ಎಡಿಬಿ) ಸಹಯೋಗದಲ್ಲಿ ರಾಜ್ಯದ ಉನ್ನತ ಶಿಕ್ಷಣ ಸಂಸ್ಥೆಗಳ ಮೂಲ ಸೌಕರ್ಯ ಉನ್ನತೀಕರಿಸುವ ಮೂಲಕ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ಯೋಜನೆ ರೂಪಿಸಿದೆ. ಇದರ ಅಂಗವಾಗಿ ರಾಜ್ಯದ ಒಂಬತ್ತು ಕಡೆಗಳಲ್ಲಿ ಉತ್ಕೃಷ್ಟತಾ ಕೇಂದ್ರ ಸ್ಥಾಪಿಸಲು ಮುಂದಾಗಿದೆ.</p>.<p>ಯೋಜನೆಯ ಭಾಗವಾಗಿ ಎಡಿಬಿ ನಿಯೋಗವು ಸೋಮವಾರ ಮಂಗಳೂರಿನ ಕರ್ನಾಟಕ ಪಾಲಿಟೆಕ್ನಿಕ್ ಸಂಸ್ಥೆಗೆ (ಕೆಪಿಟಿ) ಭೇಟಿ ನೀಡಿತು. ಸಂಸ್ಥೆಯ ಅಧಿಕಾರಿಗಳು ಮೂಲ ಸೌಕರ್ಯ ಹಾಗೂ ಉತ್ಕೃಷ್ಟತಾ ಕೇಂದ್ರದ ಸ್ಥಾಪನೆಗೆ ಸಂಬಂಧಿಸಿದ ಸಿದ್ದತೆಗಳ ವರದಿಯನ್ನು ಮಂಡಿಸಿದರು. </p>.<p>ನಿಯೋಗದ ಸದಸ್ಯರು ಕ್ಯಾಂಪಸ್ ಭೇಟಿ, ಕಟ್ಟಡ ಮತ್ತು ಸ್ಥಳ ಪರಿಶೀಲನೆ ನಡೆಸಿ, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಎಡಿಬಿ ನಿಯೋಗದಲ್ಲಿ ತಜ್ಞರಾದ ನಹ್ಯುಮ್ ಕಿಮ್, ಶೌನ್ ಎಂ. ವೆಲ್ಬೋರ್ನ್–ವುಡ್, ಮೊಹಮ್ಮದ್ ಫೈಝ್, ಯಶ್ಪಾಲ್ ಮಲ್ಲಿಕ್, ಸ್ಯಾಮುಯೆಲ್ ಇದ್ದರು. </p>.<p>ಉದ್ದೇಶಿತ ಉತ್ಕೃಷ್ಟತಾ ಕೇಂದ್ರವು ಕೌಶಲಾಭಿವೃದ್ಧಿ, ಉದ್ಯಮದ ಅವಶ್ಯಕತೆಗಳಿಗೆ ಹೊಂದಿಕೊಳ್ಳುವ ತರಬೇತಿ ಮತ್ತು ಡಿಜಿಟಲ್ ಪರಿವರ್ತನೆಗೆ ಉತ್ತೇಜನ ನೀಡುವುದು, ಸ್ಥಳೀಯ ಕೈಗಾರಿಕೆಗಳೊಂದಿಗೆ ಸಹಭಾಗಿತ್ವ ಸ್ಥಾಪಿಸುವ ಉದ್ದೇಶ ಹೊಂದಿದೆ ಎಂದು ತಿಳಿಸಲಾಯಿತು.</p>.<p>ಸಂಸ್ಥೆಯ ಪ್ರಾಚಾರ್ಯ ಹರೀಶ ಶೆಟ್ಟಿ, ಕುಲಸಚಿವೆ ವಿನೋದ ಕುಮಾರಿ ಉಪಸ್ಥಿತರಿದ್ದರು. ಉಪನ್ಯಾಸಕ ಹರೀಶ ಸಿ. ಪಿ. ವರದಿ ಮಂಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ರಾಜ್ಯ ಸರ್ಕಾರವು ಏಷಿಯನ್ ಡೆವಲಪ್ಮೆಂಟ್ ಬ್ಯಾಂಕ್ (ಎಡಿಬಿ) ಸಹಯೋಗದಲ್ಲಿ ರಾಜ್ಯದ ಉನ್ನತ ಶಿಕ್ಷಣ ಸಂಸ್ಥೆಗಳ ಮೂಲ ಸೌಕರ್ಯ ಉನ್ನತೀಕರಿಸುವ ಮೂಲಕ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ಯೋಜನೆ ರೂಪಿಸಿದೆ. ಇದರ ಅಂಗವಾಗಿ ರಾಜ್ಯದ ಒಂಬತ್ತು ಕಡೆಗಳಲ್ಲಿ ಉತ್ಕೃಷ್ಟತಾ ಕೇಂದ್ರ ಸ್ಥಾಪಿಸಲು ಮುಂದಾಗಿದೆ.</p>.<p>ಯೋಜನೆಯ ಭಾಗವಾಗಿ ಎಡಿಬಿ ನಿಯೋಗವು ಸೋಮವಾರ ಮಂಗಳೂರಿನ ಕರ್ನಾಟಕ ಪಾಲಿಟೆಕ್ನಿಕ್ ಸಂಸ್ಥೆಗೆ (ಕೆಪಿಟಿ) ಭೇಟಿ ನೀಡಿತು. ಸಂಸ್ಥೆಯ ಅಧಿಕಾರಿಗಳು ಮೂಲ ಸೌಕರ್ಯ ಹಾಗೂ ಉತ್ಕೃಷ್ಟತಾ ಕೇಂದ್ರದ ಸ್ಥಾಪನೆಗೆ ಸಂಬಂಧಿಸಿದ ಸಿದ್ದತೆಗಳ ವರದಿಯನ್ನು ಮಂಡಿಸಿದರು. </p>.<p>ನಿಯೋಗದ ಸದಸ್ಯರು ಕ್ಯಾಂಪಸ್ ಭೇಟಿ, ಕಟ್ಟಡ ಮತ್ತು ಸ್ಥಳ ಪರಿಶೀಲನೆ ನಡೆಸಿ, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಎಡಿಬಿ ನಿಯೋಗದಲ್ಲಿ ತಜ್ಞರಾದ ನಹ್ಯುಮ್ ಕಿಮ್, ಶೌನ್ ಎಂ. ವೆಲ್ಬೋರ್ನ್–ವುಡ್, ಮೊಹಮ್ಮದ್ ಫೈಝ್, ಯಶ್ಪಾಲ್ ಮಲ್ಲಿಕ್, ಸ್ಯಾಮುಯೆಲ್ ಇದ್ದರು. </p>.<p>ಉದ್ದೇಶಿತ ಉತ್ಕೃಷ್ಟತಾ ಕೇಂದ್ರವು ಕೌಶಲಾಭಿವೃದ್ಧಿ, ಉದ್ಯಮದ ಅವಶ್ಯಕತೆಗಳಿಗೆ ಹೊಂದಿಕೊಳ್ಳುವ ತರಬೇತಿ ಮತ್ತು ಡಿಜಿಟಲ್ ಪರಿವರ್ತನೆಗೆ ಉತ್ತೇಜನ ನೀಡುವುದು, ಸ್ಥಳೀಯ ಕೈಗಾರಿಕೆಗಳೊಂದಿಗೆ ಸಹಭಾಗಿತ್ವ ಸ್ಥಾಪಿಸುವ ಉದ್ದೇಶ ಹೊಂದಿದೆ ಎಂದು ತಿಳಿಸಲಾಯಿತು.</p>.<p>ಸಂಸ್ಥೆಯ ಪ್ರಾಚಾರ್ಯ ಹರೀಶ ಶೆಟ್ಟಿ, ಕುಲಸಚಿವೆ ವಿನೋದ ಕುಮಾರಿ ಉಪಸ್ಥಿತರಿದ್ದರು. ಉಪನ್ಯಾಸಕ ಹರೀಶ ಸಿ. ಪಿ. ವರದಿ ಮಂಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>