<p><strong>ಮಂಗಳೂರು:</strong> ಮಂಗಳೂರು– ಉಡುಪಿ– ಮಣಿಪಾಲ ನಡುವೆ ಮೆಟ್ರೊ ರೈಲು ಮಾರ್ಗ ಕಾರಿಡಾರ್ ನಿರ್ಮಾಣದ ಕಾರ್ಯಸಾಧ್ಯತೆ ಪರಿಶೀಲನೆಗೆ ರಾಜ್ಯ ಸರ್ಕಾರ ಮುಂದಾಗಿದೆ.</p>.<p>64 ಕಿ.ಮೀ ಇಂಟರ್ಸಿಟಿ ಮೆಟ್ರೊ ರೈಲು ಪ್ರಾರಂಭಿಸುವ ಸಂಬಂಧ ತಾಂತ್ರಿಕ, ಆರ್ಥಿಕ ಕಾರ್ಯಸಾಧ್ಯತೆ ಬಗ್ಗೆ ಅಧ್ಯಯನ ನಡೆಸಲು ರಾಜ್ಯ ಸರ್ಕಾರವು ಬೆಂಗಳೂರು ಮೆಟ್ರೊ ರೈಲು ನಿಗಮಕ್ಕೆ ನಿರ್ದೇಶನ ನೀಡಿದೆ. ಈ ಬಗ್ಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪತ್ರವನ್ನು ಕಳುಹಿಸಿದೆ.</p>.<p>ಮಂಗಳೂರು– ಉಡುಪಿ ನಡುವೆ ಮೆಟ್ರೊ ಮಾರ್ಗ ನಿರ್ಮಾಣ ಮಾಡಬೇಕು ಎಂದು ಕೆಪಿಸಿಸಿ ಮಾಜಿ ಕಾರ್ಯದರ್ಶಿ ಮೋಹನದಾಸ ಹೆಗ್ಡೆ ಅವರು ಈ ಸಂಬಂಧ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ‘ಎರಡು ನಗರಗಳ ನಡುವೆ ಮೆಟ್ರೊ ರೈಲು ಸಂಪರ್ಕ ಅಭಿವೃದ್ಧಿಯಾದರೆ, ಇಲ್ಲಿ ದೊಡ್ಡ ಉದ್ದಿಮೆಗಳು ಬರುತ್ತವೆ, ಕರಾವಳಿಯ ಆರ್ಥಿಕತೆ ಹೆಚ್ಚುತ್ತದೆ’ ಎಂದು ಮೋಹನದಾಸ ಹೆಗ್ಡೆ ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಮಂಗಳೂರು– ಉಡುಪಿ– ಮಣಿಪಾಲ ನಡುವೆ ಮೆಟ್ರೊ ರೈಲು ಮಾರ್ಗ ಕಾರಿಡಾರ್ ನಿರ್ಮಾಣದ ಕಾರ್ಯಸಾಧ್ಯತೆ ಪರಿಶೀಲನೆಗೆ ರಾಜ್ಯ ಸರ್ಕಾರ ಮುಂದಾಗಿದೆ.</p>.<p>64 ಕಿ.ಮೀ ಇಂಟರ್ಸಿಟಿ ಮೆಟ್ರೊ ರೈಲು ಪ್ರಾರಂಭಿಸುವ ಸಂಬಂಧ ತಾಂತ್ರಿಕ, ಆರ್ಥಿಕ ಕಾರ್ಯಸಾಧ್ಯತೆ ಬಗ್ಗೆ ಅಧ್ಯಯನ ನಡೆಸಲು ರಾಜ್ಯ ಸರ್ಕಾರವು ಬೆಂಗಳೂರು ಮೆಟ್ರೊ ರೈಲು ನಿಗಮಕ್ಕೆ ನಿರ್ದೇಶನ ನೀಡಿದೆ. ಈ ಬಗ್ಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪತ್ರವನ್ನು ಕಳುಹಿಸಿದೆ.</p>.<p>ಮಂಗಳೂರು– ಉಡುಪಿ ನಡುವೆ ಮೆಟ್ರೊ ಮಾರ್ಗ ನಿರ್ಮಾಣ ಮಾಡಬೇಕು ಎಂದು ಕೆಪಿಸಿಸಿ ಮಾಜಿ ಕಾರ್ಯದರ್ಶಿ ಮೋಹನದಾಸ ಹೆಗ್ಡೆ ಅವರು ಈ ಸಂಬಂಧ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ‘ಎರಡು ನಗರಗಳ ನಡುವೆ ಮೆಟ್ರೊ ರೈಲು ಸಂಪರ್ಕ ಅಭಿವೃದ್ಧಿಯಾದರೆ, ಇಲ್ಲಿ ದೊಡ್ಡ ಉದ್ದಿಮೆಗಳು ಬರುತ್ತವೆ, ಕರಾವಳಿಯ ಆರ್ಥಿಕತೆ ಹೆಚ್ಚುತ್ತದೆ’ ಎಂದು ಮೋಹನದಾಸ ಹೆಗ್ಡೆ ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>