ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸರ್ವಾಧಿಕಾರಿಗಳಾ: ಶಾಸಕ ಭರತ್ ಶೆಟ್ಟಿ ಕಿಡಿ

Published 16 ಡಿಸೆಂಬರ್ 2023, 12:48 IST
Last Updated 16 ಡಿಸೆಂಬರ್ 2023, 12:48 IST
ಅಕ್ಷರ ಗಾತ್ರ

ಸುರತ್ಕಲ್: ‘ರಾಜಕಾರಣಿಗಳ ವಿರುದ್ಧ ಸಾರ್ವಜನಿಕರು ಮಾಡುವ ಟೀಕೆಯನ್ನು ಅರಗಿಸಿಕೊಂಡು ರಾಜಕಾರಣ ಮಾಡುವ ಉದಾರ ಮನಸ್ಸು ಬೆಳೆಸಿಕೊಳ್ಳಿ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸರ್ವಾಧಿಕಾರಿಗಳಾ? ನಿಂದನೆ ಮಾಡಿದ ಆರೋಪದಲ್ಲಿ ಬಿಜೆಪಿ ಕಾರ್ಯಕರ್ತನನ್ನು ಬಂಧಿಸಿ ಕಾರ್ಯಕರ್ತರಲ್ಲಿ ಭೀತಿ ಮೂಡಿಸುವ ನಿಮ್ಮ ಕುತಂತ್ರವನ್ನು ಮೆಟ್ಟಿ ನಿಲ್ಲುತ್ತೇವೆ’ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಹೇಳಿದರು.

‌ಮೋದಿ, ಯೋಗಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಿಂದನೆಯ ಮಹಾಪೂರ ಹರಿದು ಬರುತ್ತದೆ. ಇದರ ವಿರುದ್ಧ ಬಿಜೆಪಿ ಕಾರ್ಯಕರ್ತರು ಕೇಸು ದಾಖಲಿಸುತ್ತಾ ಹೋದರೆ ಠಾಣೆಯಲ್ಲಿ ಇರುವ ಸೆಲ್‌ಗಳು ಸಾಕಾಗದು. ಜನ ಸಾಮಾನ್ಯರು ದೂರು ನೀಡಲು ಪೊಲೀಸ್ ಠಾಣೆಗೆ ಹೋದರೆ ವಾರಗಟ್ಟಲೆ ಸತಾಯಿಸುವ ಪೊಲೀಸ್ ಇಲಾಖೆ, ಕಾಂಗ್ರೆಸ್ ಪರವಾಗಿ ಕೆಲಸ ಮಾಡಲು ತುದಿಗಾಲಲ್ಲಿ ನಿಂತಿರುವಂತೆ ಕಾಣುತ್ತದೆ. ಬಿಜೆಪಿ ಕಾರ್ಯಕರ್ತನ ಪರ ಪಕ್ಷ ಹಾಗೂ ವೈಯಕ್ತಿಕವಾಗಿ ಬೆಂಬಲಕ್ಕೆ ನಿಲ್ಲುವುದಾಗಿ ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT