<p><strong>ಮಂಗಳೂರು: </strong>ಕಾರ್ಮಿಕರು ಉಳಿದುಕೊಂಡ ಶೆಡ್ ಮೇಲೆ ಗುಡ್ಡ ಕುಸಿದ ಪರಿಣಾಮ, ಶೆಡ್ನೊಳಗೆಸಿಲುಕಿಕೊಂಡ ನಾಲ್ವರು ಕಾರ್ಮಿಕರ ಪೈಕಿ ಮೂವರು ಮೃತಪಟ್ಟಿದ್ದು, ಒಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಬಂಟ್ವಾಳ ತಾಲ್ಲೂಕು ಪಂಜಿಕಲ್ಲು ಗ್ರಾಮದ ಮುಕ್ಕುಡ ಎಂಬಲ್ಲಿ ಹೆನ್ರಿ ಕಾರ್ಲೊ ಎಂಬುವರ ಮನೆಯ ರಬ್ಬರ್ ತೋಟದಲ್ಲಿ ಕೆಲಸ ಮಾಡುತ್ತಿದ್ದ ಐವರ ಪೈಕಿ ನಾಲ್ವರು ಶೆಡ್ನೊಳಗೆ ಸಿಲುಕಿಕೊಂಡಿದ್ದರು. ಅದರಲ್ಲಿ ಮೂವರನ್ನು ರಕ್ಷಣೆ ಮಾಡಲಾಗಿತ್ತು. ಒಬ್ಬರು ಮೃತಪಟ್ಟಿದ್ದರು.</p>.<p>ಉಳಿದ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ಎಸ್ಪಿ ಋಷಿಕೇಶ್ ಸೋನಾವಣೆ ಮಾಹಿತಿ ನೀಡಿದ್ದಾರೆ.</p>.<p>ಪಾಲಕ್ಕಾಡು ನಿವಾಸಿ ಬಿಜು (44) ಬುಧವಾರ ರಾತ್ರಿ ಮೃತಪಟ್ಟವರು.ಬಾಬು (46), ಸಂತೋಷ್ ಅಲ್ಫೊನ್ಸಾ (46) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.</p>.<p>ಕಣ್ಣೂರು ನಿವಾಸಿ ಜಾನ್ (44) ಬಂಟ್ವಾಳ ಸರ್ಕರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಬಂಟ್ವಾಳ ಅಗ್ನಿಶಾಮಕ ದಳ ಹಾಗೂ ಎನ್ಡಿ.ಆರ್.ಎಫ್ ಮತ್ತು ಸ್ಥಳೀಯರ ನೆರವಿನಿಂದ ರಕ್ಷಣಾ ಕಾರ್ಯಚರಣೆ ನಡೆಯಿತು.</p>.<p>ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ, ಎಸ್ಪಿ ಋಷಿಕೇಶ್ ಸೋನಾವಣೆ, ಮಂಗಳೂರು ಉಪವಿಭಾಗಾಧಿಕಾರಿ ಮದನ್ ಮೋಹನ್ ,ತಹಶೀಲ್ದಾರ್ ಸ್ಮಿತಾರಾಮು, ಪಿ.ಡಿ.ಒ.ವಿದ್ಯಾಶಿವಾನಂ ಸ್ಥಳಕ್ಕೆ ಭೇಟಿ ನೀಡಿದರು.</p>.<p><strong>ಓದಿ...</strong></p>.<p><strong><a href="https://www.prajavani.net/district/kodagu/karnataka-rains-heavy-rain-in-various-parts-of-madikeri-bhagamandala-kodagu-district-952146.html" target="_blank">ಕೊಡಗು: ಜಿಲ್ಲೆಯಲ್ಲಿ ಮುಂದುವರಿದ ಭಾರಿ ಮಳೆ, ಶಾಲಾ - ಕಾಲೇಜುಗಳಿಗೆ ರಜೆ ಘೋಷಣೆ</a></strong></p>.<p><strong><a href="https://www.prajavani.net/district/shivamogga/shivamogga-dc-r-selvamani-announced-holiday-for-schools-and-colleges-due-to-heavy-rain-952144.html" target="_blank">ಶಿವಮೊಗ್ಗ: ಜಿಲ್ಲೆಯಲ್ಲಿ ಭಾರಿ ಮಳೆ,ಶಾಲಾ - ಕಾಲೇಜುಗಳಿಗೆ ರಜೆ ಘೋಷಣೆ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong>ಕಾರ್ಮಿಕರು ಉಳಿದುಕೊಂಡ ಶೆಡ್ ಮೇಲೆ ಗುಡ್ಡ ಕುಸಿದ ಪರಿಣಾಮ, ಶೆಡ್ನೊಳಗೆಸಿಲುಕಿಕೊಂಡ ನಾಲ್ವರು ಕಾರ್ಮಿಕರ ಪೈಕಿ ಮೂವರು ಮೃತಪಟ್ಟಿದ್ದು, ಒಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಬಂಟ್ವಾಳ ತಾಲ್ಲೂಕು ಪಂಜಿಕಲ್ಲು ಗ್ರಾಮದ ಮುಕ್ಕುಡ ಎಂಬಲ್ಲಿ ಹೆನ್ರಿ ಕಾರ್ಲೊ ಎಂಬುವರ ಮನೆಯ ರಬ್ಬರ್ ತೋಟದಲ್ಲಿ ಕೆಲಸ ಮಾಡುತ್ತಿದ್ದ ಐವರ ಪೈಕಿ ನಾಲ್ವರು ಶೆಡ್ನೊಳಗೆ ಸಿಲುಕಿಕೊಂಡಿದ್ದರು. ಅದರಲ್ಲಿ ಮೂವರನ್ನು ರಕ್ಷಣೆ ಮಾಡಲಾಗಿತ್ತು. ಒಬ್ಬರು ಮೃತಪಟ್ಟಿದ್ದರು.</p>.<p>ಉಳಿದ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ಎಸ್ಪಿ ಋಷಿಕೇಶ್ ಸೋನಾವಣೆ ಮಾಹಿತಿ ನೀಡಿದ್ದಾರೆ.</p>.<p>ಪಾಲಕ್ಕಾಡು ನಿವಾಸಿ ಬಿಜು (44) ಬುಧವಾರ ರಾತ್ರಿ ಮೃತಪಟ್ಟವರು.ಬಾಬು (46), ಸಂತೋಷ್ ಅಲ್ಫೊನ್ಸಾ (46) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.</p>.<p>ಕಣ್ಣೂರು ನಿವಾಸಿ ಜಾನ್ (44) ಬಂಟ್ವಾಳ ಸರ್ಕರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಬಂಟ್ವಾಳ ಅಗ್ನಿಶಾಮಕ ದಳ ಹಾಗೂ ಎನ್ಡಿ.ಆರ್.ಎಫ್ ಮತ್ತು ಸ್ಥಳೀಯರ ನೆರವಿನಿಂದ ರಕ್ಷಣಾ ಕಾರ್ಯಚರಣೆ ನಡೆಯಿತು.</p>.<p>ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ, ಎಸ್ಪಿ ಋಷಿಕೇಶ್ ಸೋನಾವಣೆ, ಮಂಗಳೂರು ಉಪವಿಭಾಗಾಧಿಕಾರಿ ಮದನ್ ಮೋಹನ್ ,ತಹಶೀಲ್ದಾರ್ ಸ್ಮಿತಾರಾಮು, ಪಿ.ಡಿ.ಒ.ವಿದ್ಯಾಶಿವಾನಂ ಸ್ಥಳಕ್ಕೆ ಭೇಟಿ ನೀಡಿದರು.</p>.<p><strong>ಓದಿ...</strong></p>.<p><strong><a href="https://www.prajavani.net/district/kodagu/karnataka-rains-heavy-rain-in-various-parts-of-madikeri-bhagamandala-kodagu-district-952146.html" target="_blank">ಕೊಡಗು: ಜಿಲ್ಲೆಯಲ್ಲಿ ಮುಂದುವರಿದ ಭಾರಿ ಮಳೆ, ಶಾಲಾ - ಕಾಲೇಜುಗಳಿಗೆ ರಜೆ ಘೋಷಣೆ</a></strong></p>.<p><strong><a href="https://www.prajavani.net/district/shivamogga/shivamogga-dc-r-selvamani-announced-holiday-for-schools-and-colleges-due-to-heavy-rain-952144.html" target="_blank">ಶಿವಮೊಗ್ಗ: ಜಿಲ್ಲೆಯಲ್ಲಿ ಭಾರಿ ಮಳೆ,ಶಾಲಾ - ಕಾಲೇಜುಗಳಿಗೆ ರಜೆ ಘೋಷಣೆ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>