<p><strong>ಮಂಗಳೂರು:</strong> ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಂಗಳವಾರ ದಿನವಿಡೀ ಸುರಿದ ಮಳೆ ಬುಧವಾರವೂ ಮುಂದುವರೆದಿದೆ. ಹಲವೆಡೆ ಮರಗಳು ಬಿದ್ದು, ಮಣ್ಣು ಕುಸಿದು ಹಾನಿ ಉಂಟಾಗಿದೆ.</p><p>ನಗರದಲ್ಲಿ ಮಂಗಳವಾರ ರಾತ್ರಿ ಬಿಟ್ಟು ಬಿಟ್ಟು ಮಳೆಯಾಗಿದೆ. ಬುಧವಾರ ನಸುಕಿನಲ್ಲಿ ಮಳೆ ನಿಂತಿತ್ತು. ಬೆಳಿಗ್ಗೆ 8ರ ಬಳಿಕ ತುಂತುರು ಮಳೆ ಮತ್ತೆ ಶುರುವಾಗಿದೆ.</p><p>ಉಳ್ಳಾಲ ತಾಲ್ಲೂಕಿನ ಸಜಿಪ ಪಡು ಗ್ರಾಮದ ತಲೆಮೊಗರು ಎಂಬಲ್ಲಿ ಇಸಮ್ಮ ಅವರ ಮನೆಗೆ ಪಕ್ಕದ ಮಸೀದಿಯ ಆವರಣ ಗೋಡೆ ಬಿದ್ದು ಭಾಗಶಃ ಹಾನಿಯಾಗಿದೆ. </p><p>ಕೊಣಾಜೆ ಗ್ರಾಮದ ಆದಿಶಕ್ತಿ ದೇವಸ್ಥಾನ ದಡಸ್ ಎಂಬಲ್ಲಿ ತಡೆಗೋಡೆ ಕುಸಿದಿದೆ. ಕಿನ್ಯ ಗ್ರಾಮದ ಮಹಮ್ಮದ್ ಹನೀಫ್ ಅವರ ಮನೆ ಭಾಗಶಃ ಹಾನಿಗೊಳಗಾಗಿದೆ.</p>.<p><strong>ದ.ಕ: 12 ಗ್ರಾಮಗಳಲ್ಲಿ 10 ಸೆಂ.ಮೀ.ಗೂ ಅಧಿಕ ಮಳೆ</strong></p><p><strong>ಮಂಗಳೂರು:</strong> ದಕ್ಷಿಣ ಕನ್ನಡ ಜಿಲ್ಲೆ 12 ಗ್ರಾಮಗಳಲ್ಲಿ ಬುಧವಾರ ಬೆಳಿಗ್ಗೆ 8.30 ರವರೆಗಿನ 24 ಗಂಟೆಗಳಲ್ಲಿ 10 ಸೆಂ.ಮೀ. ಗೂ ಅಧಿಕ ಮಳೆಯಾಗಿದೆ.</p><p>ನೀರುಮಾರ್ಗದಲ್ಲಿ ಅತಿ ಹೆಚ್ಚು (15.7 ಸೆಂಮೀ) ಮಳೆ ದಾಖಲಾಗಿದೆ.</p><p>ಮೇರಮಜಲುವಿನಲ್ಲಿ 14.7, ಕೋಟೆಕಾರ್ನಲ್ಲಿ 12.8, ಪುದು ಗ್ರಾಮದಲ್ಲಿ 12.6, ಬಗಡಬೆಳ್ಳೂರಿನಲ್ಲಿ 12, ತಲಪಾಡಿಯಲ್ಲಿ 11.5, ಕಿನ್ಯದಲ್ಲಿ 11.1, ಐಕಳದಲ್ಲಿ 10.8, ಮುನ್ನೂರಿನಲ್ಲಿ 10.75, ಅಮ್ಟಾಡಿಯಲ್ಲಿ 10.7, ರಾಯಿಯಲ್ಲಿ 10.1 ಹಾಗೂ ಪಡುಮಾರ್ನಾಡಿನಲ್ಲಿ 10.05 ಸೆಂ.ಮೀ ಮಳೆಯಾಗಿದೆ ಎಂದು ಜಿಲ್ಲಾಡಳಿತದ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಂಗಳವಾರ ದಿನವಿಡೀ ಸುರಿದ ಮಳೆ ಬುಧವಾರವೂ ಮುಂದುವರೆದಿದೆ. ಹಲವೆಡೆ ಮರಗಳು ಬಿದ್ದು, ಮಣ್ಣು ಕುಸಿದು ಹಾನಿ ಉಂಟಾಗಿದೆ.</p><p>ನಗರದಲ್ಲಿ ಮಂಗಳವಾರ ರಾತ್ರಿ ಬಿಟ್ಟು ಬಿಟ್ಟು ಮಳೆಯಾಗಿದೆ. ಬುಧವಾರ ನಸುಕಿನಲ್ಲಿ ಮಳೆ ನಿಂತಿತ್ತು. ಬೆಳಿಗ್ಗೆ 8ರ ಬಳಿಕ ತುಂತುರು ಮಳೆ ಮತ್ತೆ ಶುರುವಾಗಿದೆ.</p><p>ಉಳ್ಳಾಲ ತಾಲ್ಲೂಕಿನ ಸಜಿಪ ಪಡು ಗ್ರಾಮದ ತಲೆಮೊಗರು ಎಂಬಲ್ಲಿ ಇಸಮ್ಮ ಅವರ ಮನೆಗೆ ಪಕ್ಕದ ಮಸೀದಿಯ ಆವರಣ ಗೋಡೆ ಬಿದ್ದು ಭಾಗಶಃ ಹಾನಿಯಾಗಿದೆ. </p><p>ಕೊಣಾಜೆ ಗ್ರಾಮದ ಆದಿಶಕ್ತಿ ದೇವಸ್ಥಾನ ದಡಸ್ ಎಂಬಲ್ಲಿ ತಡೆಗೋಡೆ ಕುಸಿದಿದೆ. ಕಿನ್ಯ ಗ್ರಾಮದ ಮಹಮ್ಮದ್ ಹನೀಫ್ ಅವರ ಮನೆ ಭಾಗಶಃ ಹಾನಿಗೊಳಗಾಗಿದೆ.</p>.<p><strong>ದ.ಕ: 12 ಗ್ರಾಮಗಳಲ್ಲಿ 10 ಸೆಂ.ಮೀ.ಗೂ ಅಧಿಕ ಮಳೆ</strong></p><p><strong>ಮಂಗಳೂರು:</strong> ದಕ್ಷಿಣ ಕನ್ನಡ ಜಿಲ್ಲೆ 12 ಗ್ರಾಮಗಳಲ್ಲಿ ಬುಧವಾರ ಬೆಳಿಗ್ಗೆ 8.30 ರವರೆಗಿನ 24 ಗಂಟೆಗಳಲ್ಲಿ 10 ಸೆಂ.ಮೀ. ಗೂ ಅಧಿಕ ಮಳೆಯಾಗಿದೆ.</p><p>ನೀರುಮಾರ್ಗದಲ್ಲಿ ಅತಿ ಹೆಚ್ಚು (15.7 ಸೆಂಮೀ) ಮಳೆ ದಾಖಲಾಗಿದೆ.</p><p>ಮೇರಮಜಲುವಿನಲ್ಲಿ 14.7, ಕೋಟೆಕಾರ್ನಲ್ಲಿ 12.8, ಪುದು ಗ್ರಾಮದಲ್ಲಿ 12.6, ಬಗಡಬೆಳ್ಳೂರಿನಲ್ಲಿ 12, ತಲಪಾಡಿಯಲ್ಲಿ 11.5, ಕಿನ್ಯದಲ್ಲಿ 11.1, ಐಕಳದಲ್ಲಿ 10.8, ಮುನ್ನೂರಿನಲ್ಲಿ 10.75, ಅಮ್ಟಾಡಿಯಲ್ಲಿ 10.7, ರಾಯಿಯಲ್ಲಿ 10.1 ಹಾಗೂ ಪಡುಮಾರ್ನಾಡಿನಲ್ಲಿ 10.05 ಸೆಂ.ಮೀ ಮಳೆಯಾಗಿದೆ ಎಂದು ಜಿಲ್ಲಾಡಳಿತದ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>