‘ಈ ಹಿಂದೆ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಕೆಂಪ ಹನುಮಯ್ಯ, ಕೀಕಾನ ರಾಮಚಂದ್ರ, ಬಿ.ಎಂ. ಇದಿನಬ್ಬ, ಹರಿಕೃಷ್ಣ ಪುನರೂರು ಮತ್ತು ಪ್ರದೀಪ್ ಕುಮಾರ್ ಕಲ್ಕೂರ ಅವರು ಹಾಕಿಕೊಟ್ಟ ಹಾದಿಯಲ್ಲಿ ಮುನ್ನಡೆದು, ಹಿರಿಯ ಸಾಹಿತಿಗಳ ಮಾರ್ಗದರ್ಶನದಲ್ಲಿ ಕನ್ನಡದ ಕಾಯಕವನ್ನು ನಡೆಸುವೆ’ ಎಂದು ಸಾಹಿತ್ಯ ಪರಿಷತ್ ನೂತನ ಅಧ್ಯಕ್ಷ ಡಾ.ಎಂ.ಪಿ. ಶ್ರೀನಾಥ ಭರವಸೆ ನೀಡಿದರು.