ಪ್ರಾಧ್ಯಾಪಕ ಡಾ. ಮಾಧವ ಎಂ.ಕೆ., ಸಾಹಿತಿ ಶಕುಂತಲಾ ಭಟ್ ಮಾತನಾಡಿದರು. ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಡಾ. ಮಂಜುನಾಥ್ ರೇವಣಕರ್ ಮಾತನಾಡಿ, ‘ತಾಲ್ಲೂಕಿನ ಎಲ್ಲ ಸಾಹಿತಿಗಳನ್ನು ಒಟ್ಟು ಸೇರಿಸಿ ಕನ್ನಡ ನಾಡು –ನುಡಿ ಬೆಳೆಸುವಲ್ಲಿ ಹೆಚ್ಚಿನ ಮುತುವರ್ಜಿವಹಿಸಲಾಗುವುದು’ ಎಂದರು. ಮುದ್ದು ಮೂಡುಬೆಳ್ಳೆ, ಡಾ. ಪಿ. ಅನಂತಕೃಷ್ಣ, ಬಂದಗದ್ದೆ ನಾಗರಾಜ್, ಡಾ. ಜ್ಯೋತಿ ಚೇಳ್ಯಾರ್, ಕೇಶವ ಕುಡ್ಲ ಅವರನ್ನು ಸನ್ಮಾನಿಸಲಾಯಿತು.