<p><strong>ಕಾಸರಗೋಡು:</strong> ಪತ್ನಿ ಮೇಲೆ ಹಲ್ಲೆ ನಡೆಸಿ ವ್ಯಕ್ತಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಸರಗೋಡಿನ ಕಾಞಂಗಾಡಿನನಲ್ಲಿ ಗುರುವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಕಾಂಞಂಗಾಡ್ನ ಕಡಪ್ಪುರದ ಬಾವಾನಗರ ನಿವಾಸಿ ಇಬ್ರಾಹೀಂ ಮೃತ ವ್ಯಕ್ತಿ.</p>.ಕಾಸರಗೋಡು: ‘ಕುಣಿಯ’ದಲ್ಲಿ ಸಮಸ್ತ ಶತಮಾನೋತ್ಸವ ಸಂಭ್ರಮ.<p>ಇಬ್ರಾಹೀಂ ಅವರ ಪತ್ನಿ ಮರ್ಯಮ್ ಅವರ ತಲೆಗೆ ಗಂಭೀರ ಗಾಯಗಳಾಗಿದ್ದು, ಮಂಗಳೂರಿನ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.</p><p>ಮರ್ಯಮ್ ಅವರ ಕೂಗಾಟ ಕೇಳಿ ನೆರಮನೆಯವರು ಧಾವಿಸಿ ಬಂದಿದ್ದಾರೆ. ಈ ವೇಳೆ ಅವರು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ತಲೆಗೆ ಗಾಯಗಳಾಗಿದ್ದವು ಎಂದು ಹೊಸದುರ್ಗ ಪೊಲೀಸ್ ಠಾಣೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.ಕಾಸರಗೋಡು: 5 ವರ್ಷಗಳ ನಂತರ ವ್ಯಕ್ತಿ ರಾಜಸ್ಥಾನದಲ್ಲಿ ಪತ್ತೆ.<p>ಘಟನೆ ನಡೆದ ಕೂಡಲೇ ಇಬ್ರಾಹೀಂ ಸ್ಥಳದಿಂದ ಪರಾರಿಯಾಗಿದ್ದಾನೆ. ಮರ್ಯಮ್ ಅವರನ್ನು ಕಾಂಙಂಗಾಡ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಮಂಗಳೂರಿಗೆ ಕರೆದುಕೊಂಡು ಹೋಗುವಂತೆ ವೈದ್ಯರು ಸೂಚಿಸಿದ್ದಾರೆ.</p><p>ಇದಾದ ಬಳಿಕ, ಮನೆಯ ಪಕ್ಕದ ಮರದ ಕೊಂಬೆಗೆ ನೇಣು ಹಾಕಿಕೊಂಡ ರೀತಿಯಲ್ಲಿ ಇಬ್ರಾಹೀಂ ಶವ ಪತ್ತೆಯಾಗಿದೆ.</p>.ಕಾಸರಗೋಡು: ಗಂಟಲಲ್ಲಿ ಹಾಲು ಸಿಲುಕಿ ಮಗು ಮೃತ್ಯು.<p>ಹೊಸದುರ್ಗ ಪೊಲೀಸರು ಈ ಘಟನೆಯ ಕುರಿತು ತನಿಖೆ ಆರಂಭಿಸಿದ್ದಾರೆ. ದಂಪತಿ ನಡುವಿನ ವೈವಾಹಿಕ ಸಮಸ್ಯೆಗಳುಘಟನೆಗೆ ಕಾರಣವಾಗಿರಬಹುದು ಎಂದು ಪೊಲೀಸ್ ಅಧಿಕಾರಿಗಳು ಶಂಕಿಸಿದ್ದಾರೆ.</p><p>ತನಿಖೆಯ ಭಾಗವಾಗಿ ಕುಟುಂಬದ ಸದಸ್ಯರು ಮತ್ತು ನೆರೆಹೊರೆಯವರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಸಂಬಂಧಿಕರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.</p> .ತಿರುವನಂತಪುರ-ಕಾಸರಗೋಡು ಆರ್ಆರ್ಟಿಎಸ್ ಯೋಜನೆಗೆ ಕೇರಳ ಸರ್ಕಾರ ಸಮ್ಮತಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಸರಗೋಡು:</strong> ಪತ್ನಿ ಮೇಲೆ ಹಲ್ಲೆ ನಡೆಸಿ ವ್ಯಕ್ತಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಸರಗೋಡಿನ ಕಾಞಂಗಾಡಿನನಲ್ಲಿ ಗುರುವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಕಾಂಞಂಗಾಡ್ನ ಕಡಪ್ಪುರದ ಬಾವಾನಗರ ನಿವಾಸಿ ಇಬ್ರಾಹೀಂ ಮೃತ ವ್ಯಕ್ತಿ.</p>.ಕಾಸರಗೋಡು: ‘ಕುಣಿಯ’ದಲ್ಲಿ ಸಮಸ್ತ ಶತಮಾನೋತ್ಸವ ಸಂಭ್ರಮ.<p>ಇಬ್ರಾಹೀಂ ಅವರ ಪತ್ನಿ ಮರ್ಯಮ್ ಅವರ ತಲೆಗೆ ಗಂಭೀರ ಗಾಯಗಳಾಗಿದ್ದು, ಮಂಗಳೂರಿನ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.</p><p>ಮರ್ಯಮ್ ಅವರ ಕೂಗಾಟ ಕೇಳಿ ನೆರಮನೆಯವರು ಧಾವಿಸಿ ಬಂದಿದ್ದಾರೆ. ಈ ವೇಳೆ ಅವರು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ತಲೆಗೆ ಗಾಯಗಳಾಗಿದ್ದವು ಎಂದು ಹೊಸದುರ್ಗ ಪೊಲೀಸ್ ಠಾಣೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.ಕಾಸರಗೋಡು: 5 ವರ್ಷಗಳ ನಂತರ ವ್ಯಕ್ತಿ ರಾಜಸ್ಥಾನದಲ್ಲಿ ಪತ್ತೆ.<p>ಘಟನೆ ನಡೆದ ಕೂಡಲೇ ಇಬ್ರಾಹೀಂ ಸ್ಥಳದಿಂದ ಪರಾರಿಯಾಗಿದ್ದಾನೆ. ಮರ್ಯಮ್ ಅವರನ್ನು ಕಾಂಙಂಗಾಡ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಮಂಗಳೂರಿಗೆ ಕರೆದುಕೊಂಡು ಹೋಗುವಂತೆ ವೈದ್ಯರು ಸೂಚಿಸಿದ್ದಾರೆ.</p><p>ಇದಾದ ಬಳಿಕ, ಮನೆಯ ಪಕ್ಕದ ಮರದ ಕೊಂಬೆಗೆ ನೇಣು ಹಾಕಿಕೊಂಡ ರೀತಿಯಲ್ಲಿ ಇಬ್ರಾಹೀಂ ಶವ ಪತ್ತೆಯಾಗಿದೆ.</p>.ಕಾಸರಗೋಡು: ಗಂಟಲಲ್ಲಿ ಹಾಲು ಸಿಲುಕಿ ಮಗು ಮೃತ್ಯು.<p>ಹೊಸದುರ್ಗ ಪೊಲೀಸರು ಈ ಘಟನೆಯ ಕುರಿತು ತನಿಖೆ ಆರಂಭಿಸಿದ್ದಾರೆ. ದಂಪತಿ ನಡುವಿನ ವೈವಾಹಿಕ ಸಮಸ್ಯೆಗಳುಘಟನೆಗೆ ಕಾರಣವಾಗಿರಬಹುದು ಎಂದು ಪೊಲೀಸ್ ಅಧಿಕಾರಿಗಳು ಶಂಕಿಸಿದ್ದಾರೆ.</p><p>ತನಿಖೆಯ ಭಾಗವಾಗಿ ಕುಟುಂಬದ ಸದಸ್ಯರು ಮತ್ತು ನೆರೆಹೊರೆಯವರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಸಂಬಂಧಿಕರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.</p> .ತಿರುವನಂತಪುರ-ಕಾಸರಗೋಡು ಆರ್ಆರ್ಟಿಎಸ್ ಯೋಜನೆಗೆ ಕೇರಳ ಸರ್ಕಾರ ಸಮ್ಮತಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>