ಕಾಸರಗೋಡಿನಲ್ಲಿ ಕೋವಿಡ್–19 ಸೋಂಕು ಹೆಚ್ಚುತ್ತಿದ್ದ ವೇಳೆ ಉಭಯ ಜಿಲ್ಲೆಗಳ ತಲಪಾಡಿ ಗಡಿಯನ್ನು ಮುಚ್ಚಲಾಗಿತ್ತು. ಬಳಿಕ ಕೇರಳ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ವೈದ್ಯಕೀಯ ತುರ್ತು ಅವಶ್ಯಕತೆಗಳಿಗೆ ಸಂಚಾರದ ಅವಕಾಶ ಲಭಿಸಿತ್ತು. ಈಗ ಲಾಕ್ಡೌನ್ ಸಡಿಲಗೊಂಡರೂ ದಕ್ಷಿಣ ಕನ್ನಡ ಜಿಲ್ಲಾಡಳಿತವು ಸಂಚಾರಕ್ಕೆ ಅನುವು ಮಾಡಿಕೊಡದ ಪರಿಣಾಮ ಕಾಸರಗೋಡು ಬಿಜೆಪಿ ಪ್ರತಿಭಟನೆ ನಡೆಸಿತ್ತು.