ಕೃತಿ ಬಿಡುಗಡೆ ಮಾಡಿದ ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಮಾತನಾಡಿ, ‘ಸತತ ಪರಿಶ್ರಮದಿಂದ ಸಾಧನೆ ಸಾಧ್ಯ. ಚಿನ್ನಾ ಅವರನ್ನು ನಾನು ಬಾಲ್ಯದಿಂದಲೇ ಗಮನಿಸುತ್ತಾ ಬಂದವನು. ಕಾಸರಗೋಡಿನ ಗಡಿಪ್ರದೇಶದಲ್ಲೇ ಇದ್ದುಕೊಂಡು, ಕರ್ನಾಟಕ ರಾಜ್ಯದಾದ್ಯಂತ ತಮ್ಮ ಚಟುವಟಿಕೆಗಳನ್ನು ವಿಸ್ತರಿಸಿದ್ದಾರೆ. ರಂಗಭೂಮಿ, ಸಿನಿಮಾ, ಸಂಘಟನೆ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ. ಇದಕ್ಕೆ ಅವರ ಸತತ ಪರಿಶ್ರಮವೇ ಕಾರಣ’ ಎಂದರು.