<p><strong>ಮಂಗಳೂರು</strong>: ಉದ್ಯೋಗ, ಶಿಕ್ಷಣ ಸೇರಿದಂತೆ ನಿತ್ಯವೂ ದಕ್ಷಿಣ ಕನ್ನಡ ಜಿಲ್ಲೆಗೆ ಬಂದು, ಹೋಗುವವರಿಗೆ ಪಾಸ್ ವ್ಯವಸ್ಥೆ ಪುನರಾರಂಭಿಸಲು ಕಾಸರಗೋಡು ಜಿಲ್ಲಾಡಳಿತ ನಿರ್ಧರಿಸಿದೆ.</p>.<p>ಕೋವಿಡ್ ಸೋಂಕಿನ ಕಾರಣದಿಂದ ಅಂತರರಾಜ್ಯ ಪ್ರಯಾಣವನ್ನು ಕೇರಳ ರಾಜ್ಯ ಸರ್ಕಾರ ನಿರ್ಬಂಧಿಸಿತ್ತು. ಬ್ಯಾಂಕ್ ಸೇರಿದಂತೆ ಸೀಮಿತ ಕ್ಷೇತ್ರದ ನೌಕರರಿಗಷ್ಟೇ ಪಾಸ್ ನೀಡಲಾಗುತ್ತಿತ್ತು. ಇದರಿಂದ ಉಳಿದ ವಲಯಗಳ ಉದ್ಯೋಗಿಗಳು ಕೆಲಸ ಕಳೆದುಕೊಳ್ಳುವ ಭೀತಿ ಎದುರಾಗಿತ್ತು.</p>.<p>ಈ ಸಂಬಂಧ ಸೋಮವಾರ ಕಾಸರಗೋಡು ಜಿಲ್ಲಾಧಿಕಾರಿ, ಎಸ್ಪಿ ಸೇರಿದಂತೆ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಕೇರಳ ಕಂದಾಯ ಸಚಿವ ಇ. ಚಂದ್ರಶೇಖರನ್, ನಿತ್ಯ ಕರ್ನಾಟಕಕ್ಕೆ ಬಂದು ಹೋಗುವವರಿಗೆ ಪಾಸ್ ನೀಡುವುದಾಗಿ ಪ್ರಕಟಿಸಿದರು.</p>.<p><strong>ಪರೀಕ್ಷೆ ಕಡ್ಡಾಯ: </strong>‘ಪಾಸ್ ಪಡೆದು ಕರ್ನಾಟಕಕ್ಕೆ ಹೋಗಿ, ಬರುವವರು ವಾರಕ್ಕೊಮ್ಮೆ ರ್ಯಾಪಿಡ್ ಆ್ಯಂಟಿಜೆನ್ ಪರೀಕ್ಷಾ ಕಿಟ್ ಮೂಲಕ ಕೋವಿಡ್ ಸೋಂಕು ಪತ್ತೆ ಪರೀಕ್ಷೆ ಮಾಡಿಸಿಕೊಳ್ಳಬೇಕು. ಕರ್ನಾಟಕಕ್ಕೆ ಆಹಾರ ಉತ್ಪನ್ನಗಳನ್ನು ಸಾಗಿಸುವ ವಾಹನಗಳ ಸಿಬ್ಬಂದಿಯೂ ಈ ರೀತಿ ಪರೀಕ್ಷೆಗೆ ಒಳಗಾಗಬೇಕು’ ಎಂದು ಚಂದ್ರಶೇಖರನ್ ತಿಳಿಸಿದರು.</p>.<p>ವಿವಾಹ, ಮರಣ ಮತ್ತಿತರ ಕಾರಣಗಳಿಗಾಗಿ ಅಂತರರಾಜ್ಯ ಪ್ರಯಾಣ ಮಾಡುವುದಕ್ಕೂ ಕೇರಳ ಸರ್ಕಾರ ಅನುಮತಿ ನೀಡಿದೆ. ಅಂತಹವರು ಕೂಡ ಏಳು ದಿನಗಳೊಳಗೆ ಪರೀಕ್ಷೆ ಮಾಡಿಸಿಕೊಳ್ಳುವುದು ಕಡ್ಡಾಯ. ಕೋವಿಡ್ ಸೋಂಕು ಪತ್ತೆಯಾದ ಕ್ಲಸ್ಟರ್ಗಳ ಹೊರತಾದ ಪ್ರದೇಶಗಳಲ್ಲಿ ಬೆಳಿಗ್ಗೆ 8ರಿಂದ ರಾತ್ರಿ 9 ಗಂಟೆಯವರೆಗೆ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಉದ್ಯೋಗ, ಶಿಕ್ಷಣ ಸೇರಿದಂತೆ ನಿತ್ಯವೂ ದಕ್ಷಿಣ ಕನ್ನಡ ಜಿಲ್ಲೆಗೆ ಬಂದು, ಹೋಗುವವರಿಗೆ ಪಾಸ್ ವ್ಯವಸ್ಥೆ ಪುನರಾರಂಭಿಸಲು ಕಾಸರಗೋಡು ಜಿಲ್ಲಾಡಳಿತ ನಿರ್ಧರಿಸಿದೆ.</p>.<p>ಕೋವಿಡ್ ಸೋಂಕಿನ ಕಾರಣದಿಂದ ಅಂತರರಾಜ್ಯ ಪ್ರಯಾಣವನ್ನು ಕೇರಳ ರಾಜ್ಯ ಸರ್ಕಾರ ನಿರ್ಬಂಧಿಸಿತ್ತು. ಬ್ಯಾಂಕ್ ಸೇರಿದಂತೆ ಸೀಮಿತ ಕ್ಷೇತ್ರದ ನೌಕರರಿಗಷ್ಟೇ ಪಾಸ್ ನೀಡಲಾಗುತ್ತಿತ್ತು. ಇದರಿಂದ ಉಳಿದ ವಲಯಗಳ ಉದ್ಯೋಗಿಗಳು ಕೆಲಸ ಕಳೆದುಕೊಳ್ಳುವ ಭೀತಿ ಎದುರಾಗಿತ್ತು.</p>.<p>ಈ ಸಂಬಂಧ ಸೋಮವಾರ ಕಾಸರಗೋಡು ಜಿಲ್ಲಾಧಿಕಾರಿ, ಎಸ್ಪಿ ಸೇರಿದಂತೆ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಕೇರಳ ಕಂದಾಯ ಸಚಿವ ಇ. ಚಂದ್ರಶೇಖರನ್, ನಿತ್ಯ ಕರ್ನಾಟಕಕ್ಕೆ ಬಂದು ಹೋಗುವವರಿಗೆ ಪಾಸ್ ನೀಡುವುದಾಗಿ ಪ್ರಕಟಿಸಿದರು.</p>.<p><strong>ಪರೀಕ್ಷೆ ಕಡ್ಡಾಯ: </strong>‘ಪಾಸ್ ಪಡೆದು ಕರ್ನಾಟಕಕ್ಕೆ ಹೋಗಿ, ಬರುವವರು ವಾರಕ್ಕೊಮ್ಮೆ ರ್ಯಾಪಿಡ್ ಆ್ಯಂಟಿಜೆನ್ ಪರೀಕ್ಷಾ ಕಿಟ್ ಮೂಲಕ ಕೋವಿಡ್ ಸೋಂಕು ಪತ್ತೆ ಪರೀಕ್ಷೆ ಮಾಡಿಸಿಕೊಳ್ಳಬೇಕು. ಕರ್ನಾಟಕಕ್ಕೆ ಆಹಾರ ಉತ್ಪನ್ನಗಳನ್ನು ಸಾಗಿಸುವ ವಾಹನಗಳ ಸಿಬ್ಬಂದಿಯೂ ಈ ರೀತಿ ಪರೀಕ್ಷೆಗೆ ಒಳಗಾಗಬೇಕು’ ಎಂದು ಚಂದ್ರಶೇಖರನ್ ತಿಳಿಸಿದರು.</p>.<p>ವಿವಾಹ, ಮರಣ ಮತ್ತಿತರ ಕಾರಣಗಳಿಗಾಗಿ ಅಂತರರಾಜ್ಯ ಪ್ರಯಾಣ ಮಾಡುವುದಕ್ಕೂ ಕೇರಳ ಸರ್ಕಾರ ಅನುಮತಿ ನೀಡಿದೆ. ಅಂತಹವರು ಕೂಡ ಏಳು ದಿನಗಳೊಳಗೆ ಪರೀಕ್ಷೆ ಮಾಡಿಸಿಕೊಳ್ಳುವುದು ಕಡ್ಡಾಯ. ಕೋವಿಡ್ ಸೋಂಕು ಪತ್ತೆಯಾದ ಕ್ಲಸ್ಟರ್ಗಳ ಹೊರತಾದ ಪ್ರದೇಶಗಳಲ್ಲಿ ಬೆಳಿಗ್ಗೆ 8ರಿಂದ ರಾತ್ರಿ 9 ಗಂಟೆಯವರೆಗೆ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>