ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ‘ಸಹಯಾತ್ರಿ’ ಸಂಘಟನೆ, ಟ್ವೀಟ್ ಮೂಲಕ ಕೇರಳ ಹಾಗೂ ಕರ್ನಾಟಕ ಸಾರಿಗೆ ಸಂಸ್ಥೆಗಳನ್ನು ತರಾಟೆಗೆ ತೆಗೆದುಕೊಂಡಿದೆ. ಈ ಟ್ವೀಟ್ಗೆ ಪ್ರತಿಕ್ರಿಯಿಸಿರುವ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ, ‘ಕೇರಳ ಸರ್ಕಾರ ಬಸ್ ಪ್ರಯಾಣದರವನ್ನು ಹೆಚ್ಚಿಸಿದೆ. ಒಪ್ಪಂದದ ಪ್ರಕಾರ ನಾವೂ ಅದನ್ನು ಪಾಲಿಸಬೇಕಾಗಿದೆ. ಇದರಿಂದಾಗಿ ಕರ್ನಾಟಕ ಸಾರಿಗೆ ಬಸ್ಗಳ ಪ್ರಯಾಣದರವನ್ನು ಹೆಚ್ಚಿಸಲಾಗಿದೆ’ ಎಂದು ತಿಳಿಸಿದ್ದಾರೆ.