<p><strong>ಮಂಗಳೂರು: </strong>ಅಂತರರಾಜ್ಯ ಗಡಿಗಳು ತೆರವಾಗಿದ್ದರೂ, ಕಾಸರಗೋಡು ಮತ್ತು ಮಂಗಳೂರಿನ ಮಧ್ಯೆ ಬಸ್ ಸಂಚಾರ ಇನ್ನೂ ಆರಂಭವಾಗಿಲ್ಲ. ಕಾಸರಗೋಡು ಜಿಲ್ಲಾಡಳಿತದ ಬಿಗಿ ಕ್ರಮಗಳಿಂದಾಗಿ ನಿತ್ಯ ಮಂಗಳೂರಿಗೆ ಬಂದು ಹೋಗುವ ಜನರು ತೊಂದರೆ ಅನುಭವಿಸುವಂತಾಗಿದೆ.</p>.<p>ಒಂದೆಡೆ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯು ಕಾಸರಗೋಡಿಗೆ ಬಸ್ ಓಡಿಸಲು ನಿರ್ಧರಿಸಿದೆ. ಆದರೆ, ಕೇರಳ ರಾಜ್ಯ ಸಾರಿಗೆ ಸಂಸ್ಥೆ ಮಾತ್ರ ಇನ್ನೂ ಈ ಬಗ್ಗೆ ಚಿಂತನೆಯನ್ನೇ ಮಾಡುತ್ತಿಲ್ಲ. ಇನ್ನೊಂದೆಡೆ ಕೋವಿಡ್ ತಡೆಯಲು ಕಾಸರಗೋಡು ಜಿಲ್ಲಾಡಳಿತ ಮತ್ತಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ.</p>.<p>ಜಿಲ್ಲೆಯ ಹಲವೆಡೆ ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು ಇದೇ 31ರವರೆಗೆ ವಿಸ್ತರಿಸಲಾಗಿದೆ. ಇದರಿಂದಾಗಿ ಬಸ್ ಸಂಚಾರಕ್ಕೆ ಅನುಮತಿ ಸಿಗುವುದು ಇನ್ನೂ ಅನುಮಾನವಾಗಿದೆ ಎಂದು ಸಹಯಾತ್ರಿ ತಂಡದ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಈ ಮಧ್ಯೆ ತಲಪಾಡಿ ಗಡಿ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ 16 ಗಡಿ ರಸ್ತೆಗಳಲ್ಲಿ ಕೋವಿಡ್–19 ತಪಾಸಣೆಯನ್ನು ಮತ್ತೆ ಆರಂಭಿಸಲು ಕಾಸರಗೋಡು ಜಿಲ್ಲಾಡಳಿತ ನಿರ್ಧರಿಸಿದೆ. ನಿಷೇಧಾಜ್ಞೆ ಇರುವುದರಿಂದ ಐದಕ್ಕಿಂತ ಹೆಚ್ಚು ಮಂದಿ ಗುಂಪು ಗೂಡುವುದನ್ನು ನಿಷೇಧಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong>ಅಂತರರಾಜ್ಯ ಗಡಿಗಳು ತೆರವಾಗಿದ್ದರೂ, ಕಾಸರಗೋಡು ಮತ್ತು ಮಂಗಳೂರಿನ ಮಧ್ಯೆ ಬಸ್ ಸಂಚಾರ ಇನ್ನೂ ಆರಂಭವಾಗಿಲ್ಲ. ಕಾಸರಗೋಡು ಜಿಲ್ಲಾಡಳಿತದ ಬಿಗಿ ಕ್ರಮಗಳಿಂದಾಗಿ ನಿತ್ಯ ಮಂಗಳೂರಿಗೆ ಬಂದು ಹೋಗುವ ಜನರು ತೊಂದರೆ ಅನುಭವಿಸುವಂತಾಗಿದೆ.</p>.<p>ಒಂದೆಡೆ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯು ಕಾಸರಗೋಡಿಗೆ ಬಸ್ ಓಡಿಸಲು ನಿರ್ಧರಿಸಿದೆ. ಆದರೆ, ಕೇರಳ ರಾಜ್ಯ ಸಾರಿಗೆ ಸಂಸ್ಥೆ ಮಾತ್ರ ಇನ್ನೂ ಈ ಬಗ್ಗೆ ಚಿಂತನೆಯನ್ನೇ ಮಾಡುತ್ತಿಲ್ಲ. ಇನ್ನೊಂದೆಡೆ ಕೋವಿಡ್ ತಡೆಯಲು ಕಾಸರಗೋಡು ಜಿಲ್ಲಾಡಳಿತ ಮತ್ತಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ.</p>.<p>ಜಿಲ್ಲೆಯ ಹಲವೆಡೆ ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು ಇದೇ 31ರವರೆಗೆ ವಿಸ್ತರಿಸಲಾಗಿದೆ. ಇದರಿಂದಾಗಿ ಬಸ್ ಸಂಚಾರಕ್ಕೆ ಅನುಮತಿ ಸಿಗುವುದು ಇನ್ನೂ ಅನುಮಾನವಾಗಿದೆ ಎಂದು ಸಹಯಾತ್ರಿ ತಂಡದ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಈ ಮಧ್ಯೆ ತಲಪಾಡಿ ಗಡಿ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ 16 ಗಡಿ ರಸ್ತೆಗಳಲ್ಲಿ ಕೋವಿಡ್–19 ತಪಾಸಣೆಯನ್ನು ಮತ್ತೆ ಆರಂಭಿಸಲು ಕಾಸರಗೋಡು ಜಿಲ್ಲಾಡಳಿತ ನಿರ್ಧರಿಸಿದೆ. ನಿಷೇಧಾಜ್ಞೆ ಇರುವುದರಿಂದ ಐದಕ್ಕಿಂತ ಹೆಚ್ಚು ಮಂದಿ ಗುಂಪು ಗೂಡುವುದನ್ನು ನಿಷೇಧಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>