ಪ್ರಕರಣವೇನು?: ಕಾರ್ತಿಕ ರಾಜ ಕೊಲೆ ಪ್ರಕರಣದ ತನಿಖೆ ನಡೆಯುತ್ತಿದ್ದ ಹಂತದಲ್ಲಿ 2017ರ ಜನವರಿ 1ರಂದು ಕೊಣಾಜೆ ಪೊಲೀಸ್ ಠಾಣೆಗೆ ಹೋಗಿದ್ದ ನಳಿನ್ ಕುಮಾರ್ ಕಟೀಲ್, ‘ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸಬೇಕು. ತಪ್ಪಿದರೆ ಇಡೀ ದಕ್ಷಿಣ ಕನ್ನಡ ಜಿಲ್ಲೆಗೆ ಬೆಂಕಿ ಹಚ್ಚಿಸಬೇಕಾಗುತ್ತದೆ’ ಎಂಬ ಬೆದರಿಕೆ ಒಡ್ಡಿದ್ದರು ಎಂಬುದು ಆರೋಪ.