ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೆಂಡರ್‌ ಮೂಲಕವೇ ಕಟೀಲು ಮೇಳದ ಯಕ್ಷಗಾನ: ಮುಜರಾಯಿ ಇಲಾಖೆ ಆದೇಶ

ಹೈಕೋರ್ಟ್‌ ಆದೇಶ ಪಾಲನೆಗೆ ಮುಂದಾದ ಮುಜರಾಯಿ ಇಲಾಖೆ
Last Updated 3 ನವೆಂಬರ್ 2019, 2:24 IST
ಅಕ್ಷರ ಗಾತ್ರ

ಬೆಂಗಳೂರು: ‘ಕಟೀಲು ದುರ್ಗಾ ಪರಮೇಶ್ವರಿ ದೇವಸ್ಥಾನದ ಯಕ್ಷಗಾನ ಮೇಳಗಳನ್ನು ಕಾನೂನು ಪ್ರಕಾರ ಟೆಂಡರ್‌ ಪ್ರಕ್ರಿಯೆ ಮೂಲಕವೇ ಆಯೋಜಿಸಬೇಕು’ ಎಂಬ ಹೈಕೋರ್ಟ್‌ ಆದೇಶ ಪಾಲನೆಗೆ ರಾಜ್ಯ ಮುಜರಾಯಿ ಇಲಾಖೆ ಮುಂದಾಗಿದೆ.

ಈ ಕುರಿತಂತೆ ರಾಜ್ಯ ಮುಜರಾಯಿ ಇಲಾಖೆ ಆಯುಕ್ತೆ ರೋಹಿಣಿ ಸಿಂಧೂರಿ ಕಳೆದ ತಿಂಗಳ 30ರಂದು ಆದೇಶ ಹೊರಡಿಸಿದ್ದು, ‘ಯಕ್ಷಗಾನ ಆಯೋಜನೆ ಮತ್ತು ಅದಕ್ಕಾಗಿ ಶುಲ್ಕ ಸಂಗ್ರಹವು ಯಕ್ಷಗಾನ ಆಯೋಜನೆ ಮತ್ತು ನಿಯಂತ್ರಣ ಹಕ್ಕುಗಳ ನಿಯಮ 40–ಡಿಗೆ ಒಳಪಟ್ಟಿರುತ್ತದೆ. ಆದ್ದರಿಂದ ಸರ್ಕಾರದ ಪೂರ್ವಾನುಮತಿ ಇಲ್ಲದೇ ಯಾವುದೇ ಸ್ವಯಂ ಸೇವಾ ಸಂಘಟನೆ, ಸೇವಾಸಮಿತಿ ಅಥವಾ ಅಭಿವೃದ್ಧಿ ಸಮಿತಿಗಳು ದೇಣಿಗೆ ಪಡೆಯುವುದು ಕಾನೂನು ಬಾಹಿರ’ ಎಂದು ತಿಳಿಸಿದ್ದಾರೆ.

‘ದೇವಾಲಯವು ಮುಜರಾಯಿ ಇಲಾಖೆಯ ‘ಎ’ ದರ್ಜೆ ಸ್ಥಾನಮಾನ ಹೊಂದಿದೆ. ಆದ್ದರಿಂದ ಮೇಳಗಳನ್ನು ಟೆಂಡರ್‌ ಪ್ರಕ್ರಿಯೆಗೆ ಒಳಪಡಿಸಿಯೇ ನಡೆಸಬೇಕು. ಆಡಳಿತ ಮಂಡಳಿಯು ದೇವಿ ಪ್ರಸಾದ್ ಶೆಟ್ಟಿ ಮತ್ತು ದುರ್ಗಾ ಪರಮೇಶ್ವರಿ ಯಕ್ಷಧರ್ಮ ಬೋಧಿನಿ ಚಾರಿಟಬಲ್‌ ಟ್ರಸ್ಟ್‌ ಅಡಿಯಲ್ಲಿ ಶುಲ್ಕ ಸಂಗ್ರಹ ಅಥವಾ ಮೇಳ ನಡೆಸುವುದು ಸಲ್ಲ’ ಎಂದು ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT