ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಟೀಲು ಮೇಳದ ಚೌಕಿ ಸಹಾಯಕ ನಿಧನ

Last Updated 6 ಡಿಸೆಂಬರ್ 2022, 16:20 IST
ಅಕ್ಷರ ಗಾತ್ರ

ಬಂಟ್ವಾಳ: ಕಟೀಲು ಮೇಳದ ಚೌಕಿ ಸಹಾಯಕರೊಬ್ಬರು ಯಕ್ಷಗಾನ ನಡೆಯುತ್ತಿದ್ದ ಸ್ಥಳದಲ್ಲಿ ಹೃದಯಾಘಾತಗೊಂಡು, ಮೃತಪಟ್ಟಿದ್ದಾರೆ.

ಕಟೀಲು ಐದನೇ ಮೇಳದ ಚೌಕಿ ಸಹಾಯಕ ಮಣಿನಾಲ್ಕೂರು ಗ್ರಾಮದ ಕೊಡಂಗೆ ನಿವಾಸಿ ಅಚ್ಯುತ ನಾಯಕ್ (45) ಮೃತಪಟ್ಟವರು. ಸೋಮವಾರ ರಾತ್ರಿ ಬಿ.ಸಿ.ರೋಡ್‌ನ ಪಲ್ಲಮಜಲು ಎಂಬಲ್ಲಿ ಯಕ್ಷಗಾನ ಪ್ರದರ್ಶನವಿತ್ತು. ಕಾಲಮಿತಿಯ ಯಕ್ಷಗಾನ ಮುಗಿದ ಮೇಲೆ, ರಾತ್ರಿ ಸುಮಾರು 1 ಗಂಟೆಯ ವೇಳೆಗೆ ಪರಿಕರಗಳನ್ನು ಜೋಡಿಸುತ್ತಿದ್ದ ವೇಳೆ ಅವರು ಅಸ್ವಸ್ಥಗೊಂಡಿದ್ದಾರೆ. ತಕ್ಷಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆತಂದರಾದರೂ, ವೈದ್ಯರು ಮೃತಪಟ್ಟಿರುವುದನ್ನು ಖಚಿತಪಡಿಸಿದರು. ಹಲವು ವರ್ಷಗಳಿಂದ ಕಟೀಲು ಮೇಳದ ಚೌಕಿ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT