<p><strong>ಮೂಲ್ಕಿ</strong>: ಹಿಂದೂ ಸಾಂಪ್ರದಾಯಿಕ ಉಡುಗೆ ತೊಟ್ಟು ದೇವಸ್ಥಾನ ಪ್ರವೇಶಿಸಬೇಕು ಎಂದು ವಿನಂತಿಸಿ, ಕಟೀಲು ದುರ್ಗಾ ಪರಮೇಶ್ವರಿ ದೇವಾಲಯದಲ್ಲಿ ಫಲಕ ಹಾಕಲಾಗಿದೆ.</p>.<p>ಮುಜರಾಯಿ ಇಲಾಖೆಯಿಂದ ಅಧಿಕೃತವಾಗಿ ಯಾವುದೇ ಆದೇಶ ಬಂದಿಲ್ಲ. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎನ್ನುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ದೇವಸ್ಥಾನವು ಪವಿತ್ರವಾದ ಕ್ಷೇತ್ರ ಆಗಿರುವುದರಿಂದ ಭಕ್ತಿ, ಶ್ರದ್ಧೆಯ ಭಾವ ಇರಬೇಕು. ಈ ಕಾರಣಕ್ಕೆ ಅನೇಕ ದೇವಾಲಯಗಳಲ್ಲಿ ಈ ರೀತಿ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ ಎಂದು ದೇವಾಲಯದ ಮೂಲಗಳು ತಿಳಿಸಿವೆ.</p>.<p>ಈ ಕುರಿತು ಕಟೀಲು ಕ್ಷೇತ್ರದ ಅರ್ಚಕ ಹರಿನಾರಾಯಣದಾಸ ಆಸ್ರಣ್ಣ ಅವರ ಗಮನ ಸೆಳೆದಾಗ, ‘ಧಾರ್ಮಿಕ ಕ್ಷೇತ್ರದಲ್ಲಿ ಹಿಂದೂ ಸಂಪ್ರದಾಯದಂತೆ ಉಡುಗೆ-ತೊಡುಗೆಗಳು ಇರಬೇಕು ಎಂಬ ಉದ್ದೇಶದಿಂದ ಈ ವಿನಂತಿ ಮಾಡಲಾಗಿದೆ. ಇದು ವಿನಂತಿಯೇ ಹೊರತು ಕಡ್ಡಾಯವಲ್ಲ’ ಎಂದರು.</p>.<p>ಫಲಕ ಇಲ್ಲ: ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ದೇಗುಲಗಳಲ್ಲಿ ಈ ರೀತಿಯ ಕ್ರಮ ಜಾರಿಯಾಗಲಿದೆ ಎನ್ನಲಾಗಿದ್ದು, ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಇಂತಹ ಯಾವುದೇ ಫಲಕ ಹಾಕಲಾಗಿಲ್ಲ. ಈ ಕುರಿತು ಆಡಳಿತ ಮಂಡಳಿಗೆ ಯಾವುದೇ ನಿರ್ದೇಶನ ಬಂದಿಲ್ಲ ಎಂದು ದೇವಾಲಯದ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಲ್ಕಿ</strong>: ಹಿಂದೂ ಸಾಂಪ್ರದಾಯಿಕ ಉಡುಗೆ ತೊಟ್ಟು ದೇವಸ್ಥಾನ ಪ್ರವೇಶಿಸಬೇಕು ಎಂದು ವಿನಂತಿಸಿ, ಕಟೀಲು ದುರ್ಗಾ ಪರಮೇಶ್ವರಿ ದೇವಾಲಯದಲ್ಲಿ ಫಲಕ ಹಾಕಲಾಗಿದೆ.</p>.<p>ಮುಜರಾಯಿ ಇಲಾಖೆಯಿಂದ ಅಧಿಕೃತವಾಗಿ ಯಾವುದೇ ಆದೇಶ ಬಂದಿಲ್ಲ. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎನ್ನುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ದೇವಸ್ಥಾನವು ಪವಿತ್ರವಾದ ಕ್ಷೇತ್ರ ಆಗಿರುವುದರಿಂದ ಭಕ್ತಿ, ಶ್ರದ್ಧೆಯ ಭಾವ ಇರಬೇಕು. ಈ ಕಾರಣಕ್ಕೆ ಅನೇಕ ದೇವಾಲಯಗಳಲ್ಲಿ ಈ ರೀತಿ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ ಎಂದು ದೇವಾಲಯದ ಮೂಲಗಳು ತಿಳಿಸಿವೆ.</p>.<p>ಈ ಕುರಿತು ಕಟೀಲು ಕ್ಷೇತ್ರದ ಅರ್ಚಕ ಹರಿನಾರಾಯಣದಾಸ ಆಸ್ರಣ್ಣ ಅವರ ಗಮನ ಸೆಳೆದಾಗ, ‘ಧಾರ್ಮಿಕ ಕ್ಷೇತ್ರದಲ್ಲಿ ಹಿಂದೂ ಸಂಪ್ರದಾಯದಂತೆ ಉಡುಗೆ-ತೊಡುಗೆಗಳು ಇರಬೇಕು ಎಂಬ ಉದ್ದೇಶದಿಂದ ಈ ವಿನಂತಿ ಮಾಡಲಾಗಿದೆ. ಇದು ವಿನಂತಿಯೇ ಹೊರತು ಕಡ್ಡಾಯವಲ್ಲ’ ಎಂದರು.</p>.<p>ಫಲಕ ಇಲ್ಲ: ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ದೇಗುಲಗಳಲ್ಲಿ ಈ ರೀತಿಯ ಕ್ರಮ ಜಾರಿಯಾಗಲಿದೆ ಎನ್ನಲಾಗಿದ್ದು, ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಇಂತಹ ಯಾವುದೇ ಫಲಕ ಹಾಕಲಾಗಿಲ್ಲ. ಈ ಕುರಿತು ಆಡಳಿತ ಮಂಡಳಿಗೆ ಯಾವುದೇ ನಿರ್ದೇಶನ ಬಂದಿಲ್ಲ ಎಂದು ದೇವಾಲಯದ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>