ಮುಜರಾಯಿ ಇಲಾಖೆಯಿಂದ ಅಧಿಕೃತವಾಗಿ ಯಾವುದೇ ಆದೇಶ ಬಂದಿಲ್ಲ. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎನ್ನುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ದೇವಸ್ಥಾನವು ಪವಿತ್ರವಾದ ಕ್ಷೇತ್ರ ಆಗಿರುವುದರಿಂದ ಭಕ್ತಿ, ಶ್ರದ್ಧೆಯ ಭಾವ ಇರಬೇಕು. ಈ ಕಾರಣಕ್ಕೆ ಅನೇಕ ದೇವಾಲಯಗಳಲ್ಲಿ ಈ ರೀತಿ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ ಎಂದು ದೇವಾಲಯದ ಮೂಲಗಳು ತಿಳಿಸಿವೆ.