ಮಂಗಳವಾರ ದೇವಳದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದು, ರಾತ್ರಿ ಗಂಟೆ 10.30ರಿಂದ 50 ಡೆಸಿಬಲ್ಗಿಂತ ಹೆಚ್ಚಿಗೆ ಧ್ವನಿವರ್ಧಕವನ್ನು ಬಳಸಬಾರದು ಎಂದು ಸರ್ಕಾರದಿಂದ ಈಗಾಗಲೇ ದೇವಸ್ಥಾನಗಳಿಗೆ ಸೂಚನೆ ಬಂದಿದೆ. ಈ ಹಿನ್ನೆಲೆಯಲ್ಲಿ ಯಕ್ಷಗಾನ ಪ್ರದರ್ಶನದ ಸಮಯವನ್ನು ಬದಲಾಯಿಸುವುದು ಅನಿವಾರ್ಯವಾಗಿತ್ತು. ದೇವರ ಎದುರು ಕಾಲಮಿತಿ ಯಕ್ಷಗಾನ ಬಗ್ಗೆ ಹೂಪ್ರಶ್ನೆ ಇಟ್ಟಾಗ ದೇವರ ಒಪ್ಪಿಗೆ ಬಂದಿದೆ. ಹಾಗಾಗಿ, ಕಾಲಮಿತಿ ಯಕ್ಷಗಾನ ಮಾಡುವ ಬಗ್ಗೆ ಡಳಿತ ಮಂಡಳಿ ನಿರ್ಧಾರ ಮಾಡಿದೆ ಎಂದು ಕಟೀಲು ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಕೊಡೆತ್ತೂರುಗುತ್ತು ಸನತ್ ಕುಮಾರ ಶೆಟ್ಟಿ ಹಾಗೂ ಆನುವಂಶಿಕ ಮೊಕ್ತೇಸರ ವಾಸುದೇವ ಆಸ್ರಣ್ಣ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.