‘ಸುರತ್ಕಲ್ ಠಾಣೆಯ ಪಿಎಸ್ಐ ರಘು ನಾಯಕ್ ಅವರು ಸಿಬ್ಬಂದಿ ಜೊತೆ ಗಸ್ತು ತಿರುಗುತ್ತಿದ್ದಾಗ ಕಾಟಿಪಳ್ಳದಲ್ಲಿ ಜಾನುವಾರುಗಳನ್ನು ವಧೆ ಮಾಡುವ ಸಲುವಾಗಿ ಕಟ್ಟಿ ಹಾಕಿದ್ದ ಬಗ್ಗೆ ಮಾಹಿತಿ ಬಂದಿತ್ತು. ಸ್ಥಳಕ್ಕೆ ಧಾವಿಸಿದಾಗ ಅಲ್ಲಿ 12 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕಟ್ಟಿಹಾಕಿದ್ದು ಕಂಡುಬಂತು. ಈ ಜಾನುವಾರಗಳ ಅಂದಾಜು ಮೌಲ್ಯ ₹ 3 ಲಕ್ಷ. ಈ ಸಂಬಂಧ ಇಬ್ರಾಹಿಂ ಎಂಬವರ 2020ರ ಗೋಹತ್ಯೆ ನಿಷೇಧ ಕಾಯ್ದೆ ಹಾಗೂ ಪ್ರಾಣಿ ಹಿಂಸೆ ತಡೆ ಕಾಯ್ದೆಗಳಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.