<p><strong>ಮಂಗಳೂರು</strong>: ‘ಕಾಸರಗೋಡು ಜಿಲ್ಲೆಯನ್ನು ಕರ್ನಾಟಕಕ್ಕೆ ಸೇರಿಸಲು ಹೋರಾಡಿದ್ದ ಸಾಹಿತಿ ಕಯ್ಯಾರ ಕಿಂಞಣ್ಣ ರೈ ಸ್ಮರಣಾರ್ಥ ಕೇರಳದ ಕಾಸರಗೋಡು ಜಿಲ್ಲೆಯ ಬದಿಯಡ್ಕದ ಪೆರಡಾಲದಲ್ಲಿ ನಿರ್ಮಿಸಲಾದ ಸಾಂಸ್ಕೃತಿಕ ಭವನ ಉದ್ಘಾಟನೆಗೆ ಸಜ್ಜಾಗಿದೆ’ ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ ಬೇವಿನಮರದ ತಿಳಿಸಿದರು.</p>.<p>ಪ್ರಾಧಿಕಾರದ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.</p>.<p>‘ಈ ಸಾಂಸ್ಕೃತಿಕ ಭವನ ಅ. 27ರಂದು ಲೋಕಾರ್ಪಣೆಗೊಳ್ಳಲಿದೆ. ಕರ್ನಾಟಕ ಹಾಗೂ ಕೇರಳ ರಾಜ್ಯಗಳ ಮುಖ್ಯಮಂತ್ರಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಿದ್ದೇವೆ’ ಎಂದರು.</p>.<p>‘ಕಯ್ಯಾರ ಕಿಂಞಣ್ಣ ರೈ ಕುಟುಂಬಸ್ಥರಾದ ಪ್ರಸನ್ನ ರೈ, ಈ ಭವನ, ರಸ್ತೆ ಹಾಗೂ ಉದ್ಯಾನ ನಿರ್ಮಾಣಕ್ಕೆ ಉಚಿತವಾಗಿ 1 ಎಕರೆಗೂ ಅಧಿಕ ಜಾಗ ಬಿಟ್ಟುಕೊಟ್ಟಿದ್ದಾರೆ. ₹ 2 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಭವನದಲ್ಲಿ, ಗ್ರಂಥಾಲಯ, ಗ್ರೀನ್ ರೂಂ, ಸಭಾಂಗಣ ಮತ್ತಿತರ ಸೌಕರ್ಯಗಳಿವೆ. ಸುಸಜ್ಜಿತ ಪೀಠೋಪಕರಣಗಳ ವ್ಯವಸ್ಥೆ ಮಾಡಲಿದ್ದೇವೆ. ಇದರ ನಿರ್ವಹಣೆಗೆ ಸಮಿತಿ ರಚಿಸಲಿದ್ದೇವೆ’ ಎಂದರು.</p>.<p>‘ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕಾಗಿ 11 ಸಾವಿರ ಚ.ಅಡಿ ಜಾಗ ಖರೀದಿಸಿಸಲಾಗಿದೆ. ಅಲ್ಲಿ ಕಟ್ಟಡ ಶೀಘ್ರವೇ ನಿರ್ಮಾಣವಾಗಲಿದ್ದು, ಇದಕ್ಕಾಗಿ ₹ 5.15 ಕೋಟಿ ಅನುದಾನ ಒದಗಿಸಿದ್ದೇವೆ. ಮಹಾರಾಷ್ಟ್ರದ ಅಕ್ಕಲಕೋಟೆಯಲ್ಲೂ ₹ 2 ಕೋಟಿ ವೆಚ್ಚದಲ್ಲಿ ಕನ್ನಡ ಭವನ ನಿರ್ಮಾಣವಾಗಲಿದೆ’ ಎಂದರು. </p>.<p>‘ಗಡಿನಾಡಿನ 658 ಕನ್ನಡ ಶಾಲೆಗಳಲ್ಲಿ 1.09 ಲಕ್ಷ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಈ ಶಾಲೆಗಳಿಗೆ ಕಟ್ಟಡ, ಪೀಠೋಪಕರಣ, ಸ್ಮಾರ್ಟ್ ಕ್ಲಾಸ್ ಸೌಲಭ್ಯ, ಮಕ್ಕಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಲು ಪ್ರಾಧಿಕಾರ ನೆರವು ನೀಡುತ್ತಿದೆ. ಈ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನಿವಾರಿಸಲು ಕ್ರಮ ವಹಿಸಲಾಗಿದೆ. ಈ ಶಾಲೆಗಳಿಗೆ ಕನ್ನಡ ದಿನಪತ್ರಿಕೆ ಪೂರೈಸುವ ಪ್ರಸ್ತಾವವೂ ಇದೆ’ ಎಂದರು.</p>.<p>‘ಮಂಗಳೂರಿನ ಉರ್ವಸ್ಟೋರ್ನಲ್ಲಿ ತುಳುಭವನ ನಿರ್ಮಾಣಕ್ಕೆ ₹ 3.60 ಕೋಟಿ, ಕೊಂಕಣಿ ಭವನ ನಿರ್ಮಾಣಕ್ಕೆ ₹ 3 ಕೋಟಿ , ಅಸೈಗೋಳಿಯಲ್ಲಿ ಬ್ಯಾರಿ ಭವನ ನಿರ್ಮಾಣಕ್ಕೆ ₹ 3 ಕೋಟಿ ಅನುದಾನ ನೀಡಿದ್ದೇವೆ. ಕೊಂಕಣಿ ಭವನದ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಬ್ಯಾರಿ ಭವನ ಕಾಮಗಾರಿ ಶೀಘ್ರವೇ ಆರಂಭವಾಗಲಿದೆ. ತುಳು ರಂಗಮಂದಿರ ನಿರ್ಮಾಣಕ್ಕೆ ₹ 5 ಕೋಟಿ ಒದಗಿಸಿದ್ದೇವೆ’ ಎಂದರು. </p>.<p>ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ, ಸದಸ್ಯ ಎ.ಆರ್.ಸುಬ್ಬಯ್ಯಕಟ್ಟೆ, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟ್ಯಾನಿ ಅಲ್ವಾರಿಸ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ‘ಕಾಸರಗೋಡು ಜಿಲ್ಲೆಯನ್ನು ಕರ್ನಾಟಕಕ್ಕೆ ಸೇರಿಸಲು ಹೋರಾಡಿದ್ದ ಸಾಹಿತಿ ಕಯ್ಯಾರ ಕಿಂಞಣ್ಣ ರೈ ಸ್ಮರಣಾರ್ಥ ಕೇರಳದ ಕಾಸರಗೋಡು ಜಿಲ್ಲೆಯ ಬದಿಯಡ್ಕದ ಪೆರಡಾಲದಲ್ಲಿ ನಿರ್ಮಿಸಲಾದ ಸಾಂಸ್ಕೃತಿಕ ಭವನ ಉದ್ಘಾಟನೆಗೆ ಸಜ್ಜಾಗಿದೆ’ ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ ಬೇವಿನಮರದ ತಿಳಿಸಿದರು.</p>.<p>ಪ್ರಾಧಿಕಾರದ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.</p>.<p>‘ಈ ಸಾಂಸ್ಕೃತಿಕ ಭವನ ಅ. 27ರಂದು ಲೋಕಾರ್ಪಣೆಗೊಳ್ಳಲಿದೆ. ಕರ್ನಾಟಕ ಹಾಗೂ ಕೇರಳ ರಾಜ್ಯಗಳ ಮುಖ್ಯಮಂತ್ರಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಿದ್ದೇವೆ’ ಎಂದರು.</p>.<p>‘ಕಯ್ಯಾರ ಕಿಂಞಣ್ಣ ರೈ ಕುಟುಂಬಸ್ಥರಾದ ಪ್ರಸನ್ನ ರೈ, ಈ ಭವನ, ರಸ್ತೆ ಹಾಗೂ ಉದ್ಯಾನ ನಿರ್ಮಾಣಕ್ಕೆ ಉಚಿತವಾಗಿ 1 ಎಕರೆಗೂ ಅಧಿಕ ಜಾಗ ಬಿಟ್ಟುಕೊಟ್ಟಿದ್ದಾರೆ. ₹ 2 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಭವನದಲ್ಲಿ, ಗ್ರಂಥಾಲಯ, ಗ್ರೀನ್ ರೂಂ, ಸಭಾಂಗಣ ಮತ್ತಿತರ ಸೌಕರ್ಯಗಳಿವೆ. ಸುಸಜ್ಜಿತ ಪೀಠೋಪಕರಣಗಳ ವ್ಯವಸ್ಥೆ ಮಾಡಲಿದ್ದೇವೆ. ಇದರ ನಿರ್ವಹಣೆಗೆ ಸಮಿತಿ ರಚಿಸಲಿದ್ದೇವೆ’ ಎಂದರು.</p>.<p>‘ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕಾಗಿ 11 ಸಾವಿರ ಚ.ಅಡಿ ಜಾಗ ಖರೀದಿಸಿಸಲಾಗಿದೆ. ಅಲ್ಲಿ ಕಟ್ಟಡ ಶೀಘ್ರವೇ ನಿರ್ಮಾಣವಾಗಲಿದ್ದು, ಇದಕ್ಕಾಗಿ ₹ 5.15 ಕೋಟಿ ಅನುದಾನ ಒದಗಿಸಿದ್ದೇವೆ. ಮಹಾರಾಷ್ಟ್ರದ ಅಕ್ಕಲಕೋಟೆಯಲ್ಲೂ ₹ 2 ಕೋಟಿ ವೆಚ್ಚದಲ್ಲಿ ಕನ್ನಡ ಭವನ ನಿರ್ಮಾಣವಾಗಲಿದೆ’ ಎಂದರು. </p>.<p>‘ಗಡಿನಾಡಿನ 658 ಕನ್ನಡ ಶಾಲೆಗಳಲ್ಲಿ 1.09 ಲಕ್ಷ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಈ ಶಾಲೆಗಳಿಗೆ ಕಟ್ಟಡ, ಪೀಠೋಪಕರಣ, ಸ್ಮಾರ್ಟ್ ಕ್ಲಾಸ್ ಸೌಲಭ್ಯ, ಮಕ್ಕಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಲು ಪ್ರಾಧಿಕಾರ ನೆರವು ನೀಡುತ್ತಿದೆ. ಈ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನಿವಾರಿಸಲು ಕ್ರಮ ವಹಿಸಲಾಗಿದೆ. ಈ ಶಾಲೆಗಳಿಗೆ ಕನ್ನಡ ದಿನಪತ್ರಿಕೆ ಪೂರೈಸುವ ಪ್ರಸ್ತಾವವೂ ಇದೆ’ ಎಂದರು.</p>.<p>‘ಮಂಗಳೂರಿನ ಉರ್ವಸ್ಟೋರ್ನಲ್ಲಿ ತುಳುಭವನ ನಿರ್ಮಾಣಕ್ಕೆ ₹ 3.60 ಕೋಟಿ, ಕೊಂಕಣಿ ಭವನ ನಿರ್ಮಾಣಕ್ಕೆ ₹ 3 ಕೋಟಿ , ಅಸೈಗೋಳಿಯಲ್ಲಿ ಬ್ಯಾರಿ ಭವನ ನಿರ್ಮಾಣಕ್ಕೆ ₹ 3 ಕೋಟಿ ಅನುದಾನ ನೀಡಿದ್ದೇವೆ. ಕೊಂಕಣಿ ಭವನದ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಬ್ಯಾರಿ ಭವನ ಕಾಮಗಾರಿ ಶೀಘ್ರವೇ ಆರಂಭವಾಗಲಿದೆ. ತುಳು ರಂಗಮಂದಿರ ನಿರ್ಮಾಣಕ್ಕೆ ₹ 5 ಕೋಟಿ ಒದಗಿಸಿದ್ದೇವೆ’ ಎಂದರು. </p>.<p>ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ, ಸದಸ್ಯ ಎ.ಆರ್.ಸುಬ್ಬಯ್ಯಕಟ್ಟೆ, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟ್ಯಾನಿ ಅಲ್ವಾರಿಸ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>