ನ್ಯಾ.ಎ.ವಿ. ಚಂದ್ರಶೇಖರ್ ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ನಿವೃತ್ತರಾಗಿದ್ದು, ಕರ್ನಾಟಕ ಆಡಳಿತಾತ್ಮಕ ನ್ಯಾಯಾಲಯದ (ಕೆಎಸ್ಎಟಿ) ಸದಸ್ಯ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರದೀಪ್ ಕುಮಾರ್ ಪಂಜ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಕಾರ್ಪೊರೇಟ್ ಬ್ಯಾಂಕಿಂಗ್ ವಿಭಾಗದ ಆಡಳಿತ ನಿರ್ದೇಶಕರಾಗಿ (ಎಂಡಿ) 2015ರಲ್ಲಿ ನಿವೃತ್ತರಾಗಿದ್ದಾರೆ. ಸದ್ಯ ವಿವಿಧ ಕಂಪನಿಗಳ ಆಡಳಿತ ನಿರ್ದೇಶಕರ ಮಂಡಳಿಯ ಸದಸ್ಯರಾಗಿದ್ದಾರೆ.